ಸುದ್ದಿಗಳು

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸುಳ್ಯ ಘಟಕ ಅಸ್ತಿತ್ವಕ್ಕೆ | ರಾಜ್ಯದಲ್ಲಿ 119 ಕಡೆ ಅಭ್ಯರ್ಥಿ ಘೋಷಣೆ – ಸೋಮಸುಂದರ ಕೆ.ಎಸ್ |

Share
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 119 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಪಕ್ಷದ ತತ್ವ ಸಿದ್ಧಾಂತ ವನ್ನು ಒಪ್ಪುವ ಸೂಕ್ತ ಅಭ್ಯರ್ಥಿ ಸಿಕ್ಕಿದಲ್ಲಿ ಎಲ್ಲಾ 224 ಕ್ಷೇತ್ರಗಳಲ್ಲಿ ಯೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯದರ್ಶಿ ಸೋಮಸುಂದರ ಕೆ.ಎಸ್. ತಿಳಿಸಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಮೂಡಬಿದ್ರೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಸುಳ್ಯ ಸೇರಿ ಉಳಿದ 5 ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಲಾಗುತಿದೆ. ಸ್ವಚ್ಚ, ಜನಪರ ಕಾಳಜಿಯುಳ್ಳ, ಜನರ ಆಶೋತ್ತರಗಳಿಗೆ ಸ್ಪಂದಿಸುವ ಅಭ್ಯರ್ಥಿ ಸಿಕ್ಕಿದಲ್ಲಿ ಕಣಕ್ಕಿಳಿಸಲಾಗುವುದು ಎಂದು ಅವರು ಹೇಳಿದರು. ಪಕ್ಷದ ವತಿಯಿಂದ ನಡೆಸಿದ ಚೈತನ್ಯ ಯಾತ್ರೆಯಿಂದ ಪಕ್ಷ ಸಂಘಟನೆಗೆ ಹೆಚ್ಚು ಸಹಾಯಕವಾಗಿದೆ.‌ ಸಾವಿರಾರು ಮಂದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ಘಟಕ ಅಸ್ತಿತ್ವಕ್ಕೆ ಬಂದಿದ್ದು ನೂತನ ಪದಾಧಿಕಾರಿಗಳನ್ನು ಸೋಮಸುಂದರ್ ಅವರು ಘೋಷಿಸಿದರು. ಸುಳ್ಯ ಕ್ಷೇತ್ರದ ಅಧ್ಯಕ್ಷರಾಗಿ ಅವಿನಾಶ್ ಕಾರಿಂಜ, ಪ್ರಧಾ‌ನ ಕಾರ್ಯದರ್ಶಿಯಾಗಿ ಜೀವನ್ ನಾರ್ಕೋಡು, ಕಾರ್ಯದರ್ಶಿಯಾಗಿ ಇಕ್ಬಾಲ್ ಸುಣ್ಣಮೂಲೆ ಆಯ್ಕೆಯಾಗಿದ್ದಾರೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೆಆರ್‌ಎಸ್ ಸುಳ್ಯ ಕ್ಷೇತ್ರದ ಅಧ್ಯಕ್ಷ ಅವಿನಾಶ್ ಕಾರಿಂಜ, ಪ್ರಧಾ‌ನ ಕಾರ್ಯದರ್ಶಿ ಜೀವನ್ ನಾರ್ಕೋಡು, ಸದಸ್ಯ‌ ಐವನ್ ಪೆರಾವೊ ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಂಚಗ್ರಹಿ ಯೋಗವು ಕೆಲವು ರಾಶಿಗಳಿಗೆ ವಿಶೇಷ ಅನುಕೂಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದಾ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 hours ago

ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!

ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ…

6 hours ago

ಹೊಸರುಚಿ | ಹಲಸಿನಕಾಯಿ ರಚ್ಚೆಯ ಚಟ್ನಿ

ಬಿಸಿಯಾದ ಅನ್ನದ ಜೊತೆ, ದೋಸೆ ಜೊತೆ ಹಲಸಿನಕಾಯಿ ರಚ್ಚೆಯ ಚಟ್ನಿ ಬಲು ಸೂಪರ್.‌

6 hours ago

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥ

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ.  ಚಿತ್ರದುರ್ಗದಲ್ಲಿ…

6 hours ago

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 6 ಹುಲಿ ಮರಿಗಳ ಜನನ | ಶೀಘ್ರದಲ್ಲೇ ಪ್ರವಾಸಿಗರ ವೀಕ್ಷಣೆಗೆ ಅವಕಾಶ

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಎರಡು ಹುಲಿಗಳು ಒಟ್ಟು 6 ಮರಿಗಳಿಗೆ ಜನ್ಮ…

6 hours ago

ಕುಂಭಮೇಳ | ಸಮಯ ಬಾರದೆ ಒಂದಿನಿತೂ ಮುಂದೆ ಸಾಗದು…

ಅಲಮಟ್ಟಿ ಜಲಾಶಯದಲ್ಲಿ ತುಂಬಿಕೊಂಡು ಊರಿಗೆ ತಂಪೆರಲ ಊಡುತಿದ್ದ ಕೃಷ್ಣಾ ಭೀಮೆಯರ ಮೇಲಿನ ಸೇತುವೆ…

6 hours ago