Advertisement
ಸುದ್ದಿಗಳು

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸುಳ್ಯ ಘಟಕ ಅಸ್ತಿತ್ವಕ್ಕೆ | ರಾಜ್ಯದಲ್ಲಿ 119 ಕಡೆ ಅಭ್ಯರ್ಥಿ ಘೋಷಣೆ – ಸೋಮಸುಂದರ ಕೆ.ಎಸ್ |

Share
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 119 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಪಕ್ಷದ ತತ್ವ ಸಿದ್ಧಾಂತ ವನ್ನು ಒಪ್ಪುವ ಸೂಕ್ತ ಅಭ್ಯರ್ಥಿ ಸಿಕ್ಕಿದಲ್ಲಿ ಎಲ್ಲಾ 224 ಕ್ಷೇತ್ರಗಳಲ್ಲಿ ಯೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯದರ್ಶಿ ಸೋಮಸುಂದರ ಕೆ.ಎಸ್. ತಿಳಿಸಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಮೂಡಬಿದ್ರೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಸುಳ್ಯ ಸೇರಿ ಉಳಿದ 5 ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಲಾಗುತಿದೆ. ಸ್ವಚ್ಚ, ಜನಪರ ಕಾಳಜಿಯುಳ್ಳ, ಜನರ ಆಶೋತ್ತರಗಳಿಗೆ ಸ್ಪಂದಿಸುವ ಅಭ್ಯರ್ಥಿ ಸಿಕ್ಕಿದಲ್ಲಿ ಕಣಕ್ಕಿಳಿಸಲಾಗುವುದು ಎಂದು ಅವರು ಹೇಳಿದರು. ಪಕ್ಷದ ವತಿಯಿಂದ ನಡೆಸಿದ ಚೈತನ್ಯ ಯಾತ್ರೆಯಿಂದ ಪಕ್ಷ ಸಂಘಟನೆಗೆ ಹೆಚ್ಚು ಸಹಾಯಕವಾಗಿದೆ.‌ ಸಾವಿರಾರು ಮಂದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ಘಟಕ ಅಸ್ತಿತ್ವಕ್ಕೆ ಬಂದಿದ್ದು ನೂತನ ಪದಾಧಿಕಾರಿಗಳನ್ನು ಸೋಮಸುಂದರ್ ಅವರು ಘೋಷಿಸಿದರು. ಸುಳ್ಯ ಕ್ಷೇತ್ರದ ಅಧ್ಯಕ್ಷರಾಗಿ ಅವಿನಾಶ್ ಕಾರಿಂಜ, ಪ್ರಧಾ‌ನ ಕಾರ್ಯದರ್ಶಿಯಾಗಿ ಜೀವನ್ ನಾರ್ಕೋಡು, ಕಾರ್ಯದರ್ಶಿಯಾಗಿ ಇಕ್ಬಾಲ್ ಸುಣ್ಣಮೂಲೆ ಆಯ್ಕೆಯಾಗಿದ್ದಾರೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೆಆರ್‌ಎಸ್ ಸುಳ್ಯ ಕ್ಷೇತ್ರದ ಅಧ್ಯಕ್ಷ ಅವಿನಾಶ್ ಕಾರಿಂಜ, ಪ್ರಧಾ‌ನ ಕಾರ್ಯದರ್ಶಿ ಜೀವನ್ ನಾರ್ಕೋಡು, ಸದಸ್ಯ‌ ಐವನ್ ಪೆರಾವೊ ಉಪಸ್ಥಿತರಿದ್ದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

20 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

23 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago