ಮಳೆ ಇಲ್ಲದೆ ಪಾತಾಳ ತಲುಪಿದ್ದ ಕೆಆರ್‌ಎಸ್‌ ಡ್ಯಾಂ ನೀರು | 34 ದಿನಗಳ ಬಳಿಕ 100 ಅಡಿಯ ಗಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ |

October 4, 2023
11:41 AM
ಈ ಬಾರಿ ಮುಂಗಾರು ಮಳೆ ಕೈ ಕೊಟ್ಟ ಪರಿಮಾಣ ಕೆಆರ್‌ಎಸ್ ನೀರಿನ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಕಳೆದ ಸೆಪ್ಟೆಂಬರ್ 1 ರಿಂದ 100 ಅಡಿಗಿಂತ ಕಡಿಮೆ ಪ್ರಮಾಣದಲ್ಲಿ ಡ್ಯಾಂನ ನೀರಿನ ಮಟ್ಟ ಇತ್ತು. ಇದೀಗ ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ ಇಂದು 100.36 ಅಡಿಗೆ ಡ್ಯಾಂ ನೀರಿನ ಮಟ್ಟ ಏರಿಕೆಯಾಗಿದೆ.

ಕಳೆದ ಒಂದು ತಿಂಗಳಿಂದ ಕೆಆರ್‌ಎಸ್‌ ಡ್ಯಾಂನ ನೀರು ತಮಿಳುನಾಡು ಸೇರುತ್ತಿತ್ತೇ ವಿನಃ ಮಳೆ ಇಲ್ಲದೆ ನದಿಗೆ ಯಾವ ಮೂಲದಿಂದಲೂ ಕಾವೇರಿ ನೀರು ಹರಿದು ಬರುತ್ತಿರಲಿಲ್ಲ. ನೀರಿನ ಮಟ್ಟ ದಿನದಿಂದ ದಿನಕ್ಕೆ ಪಾತಾಳ ತಲುಪುವ ಹಂತಕ್ಕೆ ಬಂದಿತ್ತು. ಇದೀಗ ತುಸು ಉಸಿರು ಬಿಡುವಂತಾಗಿದೆ. ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ  ನೀರಿನ ಮಟ್ಟ 100 ಅಡಿಗಳ ಗಡಿ ದಾಟಿದೆ. ಈ ಮೂಲಕ ಆತಂಕ ಮೂಡಿದ ರೈತರಿಗೆ ಸ್ವಲ್ಪ ಪ್ರಮಾಣದ ಸಮಾಧಾನ ತಂದಿದೆ.

Advertisement
Advertisement

ಈ ಬಾರಿ ಮುಂಗಾರು ಮಳೆ ಕೈ ಕೊಟ್ಟ ಪರಿಮಾಣ ಕೆಆರ್‌ಎಸ್ ನೀರಿನ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಕಳೆದ ಸೆಪ್ಟೆಂಬರ್ 1 ರಿಂದ 100 ಅಡಿಗಿಂತ ಕಡಿಮೆ ಪ್ರಮಾಣದಲ್ಲಿ ಡ್ಯಾಂನ ನೀರಿನ ಮಟ್ಟ ಇತ್ತು. ಇದೀಗ ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ ಇಂದು 100.36 ಅಡಿಗೆ ಡ್ಯಾಂ ನೀರಿನ ಮಟ್ಟ ಏರಿಕೆಯಾಗಿದೆ.

ಮಳೆ ಬಿದ್ದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಇದರಿಂದ ಡ್ಯಾಂ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ತಮಿಳುನಾಡು ನೀರಿನ ಕ್ಯಾತೆಯ ನಡುವೆ ಕೆಆರ್‌ಎಸ್ 100 ಅಡಿ ಭರ್ತಿಯಾಗಿರೋದು ಸಮಾಧಾನಕರ ಸಂಗತಿಯಾಗಿದೆ. ನಿನ್ನೆ 11,800 ಕ್ಯೂಸೆಕ್ ಒಳಹರಿವು ಇತ್ತು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ನಿಂತಿರುವ ಪರಿಣಾಮ ಡ್ಯಾಂಗೆ ಇಂದು 9,052 ಕ್ಯೂಸೆಕ್ ಒಳಹರಿವು ಇದೆ. ನಾಳೆ ಇನ್ನಷ್ಟು ಪ್ರಮಾದಲ್ಲಿ ಒಳಹರಿವು ಕಡಿಮೆಯಾಗಲಿದೆ. ಇತ್ತ ಡ್ಯಾಂನಿಂದ ತಮಿಳುನಾಡಿಗೆ 1,482 ಕ್ಯೂಸೆಕ್ ಬಿಡುಗಡೆ ಮಾಡಲಾಗಿದೆ.

ಅಂತರ್ಜಾಲ ಮಾಹಿತಿ

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror