ಕಳೆದ ಒಂದು ತಿಂಗಳಿಂದ ಕೆಆರ್ಎಸ್ ಡ್ಯಾಂನ ನೀರು ತಮಿಳುನಾಡು ಸೇರುತ್ತಿತ್ತೇ ವಿನಃ ಮಳೆ ಇಲ್ಲದೆ ನದಿಗೆ ಯಾವ ಮೂಲದಿಂದಲೂ ಕಾವೇರಿ ನೀರು ಹರಿದು ಬರುತ್ತಿರಲಿಲ್ಲ. ನೀರಿನ ಮಟ್ಟ ದಿನದಿಂದ ದಿನಕ್ಕೆ ಪಾತಾಳ ತಲುಪುವ ಹಂತಕ್ಕೆ ಬಂದಿತ್ತು. ಇದೀಗ ತುಸು ಉಸಿರು ಬಿಡುವಂತಾಗಿದೆ. ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್ಎಸ್ ಡ್ಯಾಂನ ನೀರಿನ ಮಟ್ಟ 100 ಅಡಿಗಳ ಗಡಿ ದಾಟಿದೆ. ಈ ಮೂಲಕ ಆತಂಕ ಮೂಡಿದ ರೈತರಿಗೆ ಸ್ವಲ್ಪ ಪ್ರಮಾಣದ ಸಮಾಧಾನ ತಂದಿದೆ.
ಈ ಬಾರಿ ಮುಂಗಾರು ಮಳೆ ಕೈ ಕೊಟ್ಟ ಪರಿಮಾಣ ಕೆಆರ್ಎಸ್ ನೀರಿನ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಕಳೆದ ಸೆಪ್ಟೆಂಬರ್ 1 ರಿಂದ 100 ಅಡಿಗಿಂತ ಕಡಿಮೆ ಪ್ರಮಾಣದಲ್ಲಿ ಡ್ಯಾಂನ ನೀರಿನ ಮಟ್ಟ ಇತ್ತು. ಇದೀಗ ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ ಇಂದು 100.36 ಅಡಿಗೆ ಡ್ಯಾಂ ನೀರಿನ ಮಟ್ಟ ಏರಿಕೆಯಾಗಿದೆ.
ಮಳೆ ಬಿದ್ದ ಹಿನ್ನೆಲೆ ಕೆಆರ್ಎಸ್ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಇದರಿಂದ ಡ್ಯಾಂ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ತಮಿಳುನಾಡು ನೀರಿನ ಕ್ಯಾತೆಯ ನಡುವೆ ಕೆಆರ್ಎಸ್ 100 ಅಡಿ ಭರ್ತಿಯಾಗಿರೋದು ಸಮಾಧಾನಕರ ಸಂಗತಿಯಾಗಿದೆ. ನಿನ್ನೆ 11,800 ಕ್ಯೂಸೆಕ್ ಒಳಹರಿವು ಇತ್ತು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ನಿಂತಿರುವ ಪರಿಣಾಮ ಡ್ಯಾಂಗೆ ಇಂದು 9,052 ಕ್ಯೂಸೆಕ್ ಒಳಹರಿವು ಇದೆ. ನಾಳೆ ಇನ್ನಷ್ಟು ಪ್ರಮಾದಲ್ಲಿ ಒಳಹರಿವು ಕಡಿಮೆಯಾಗಲಿದೆ. ಇತ್ತ ಡ್ಯಾಂನಿಂದ ತಮಿಳುನಾಡಿಗೆ 1,482 ಕ್ಯೂಸೆಕ್ ಬಿಡುಗಡೆ ಮಾಡಲಾಗಿದೆ.
ಅಂತರ್ಜಾಲ ಮಾಹಿತಿ
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…