Advertisement
MIRROR FOCUS

ಮಳೆ ಇಲ್ಲದೆ ಪಾತಾಳ ತಲುಪಿದ್ದ ಕೆಆರ್‌ಎಸ್‌ ಡ್ಯಾಂ ನೀರು | 34 ದಿನಗಳ ಬಳಿಕ 100 ಅಡಿಯ ಗಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ |

Share

ಕಳೆದ ಒಂದು ತಿಂಗಳಿಂದ ಕೆಆರ್‌ಎಸ್‌ ಡ್ಯಾಂನ ನೀರು ತಮಿಳುನಾಡು ಸೇರುತ್ತಿತ್ತೇ ವಿನಃ ಮಳೆ ಇಲ್ಲದೆ ನದಿಗೆ ಯಾವ ಮೂಲದಿಂದಲೂ ಕಾವೇರಿ ನೀರು ಹರಿದು ಬರುತ್ತಿರಲಿಲ್ಲ. ನೀರಿನ ಮಟ್ಟ ದಿನದಿಂದ ದಿನಕ್ಕೆ ಪಾತಾಳ ತಲುಪುವ ಹಂತಕ್ಕೆ ಬಂದಿತ್ತು. ಇದೀಗ ತುಸು ಉಸಿರು ಬಿಡುವಂತಾಗಿದೆ. ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ  ನೀರಿನ ಮಟ್ಟ 100 ಅಡಿಗಳ ಗಡಿ ದಾಟಿದೆ. ಈ ಮೂಲಕ ಆತಂಕ ಮೂಡಿದ ರೈತರಿಗೆ ಸ್ವಲ್ಪ ಪ್ರಮಾಣದ ಸಮಾಧಾನ ತಂದಿದೆ.

ಈ ಬಾರಿ ಮುಂಗಾರು ಮಳೆ ಕೈ ಕೊಟ್ಟ ಪರಿಮಾಣ ಕೆಆರ್‌ಎಸ್ ನೀರಿನ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಕಳೆದ ಸೆಪ್ಟೆಂಬರ್ 1 ರಿಂದ 100 ಅಡಿಗಿಂತ ಕಡಿಮೆ ಪ್ರಮಾಣದಲ್ಲಿ ಡ್ಯಾಂನ ನೀರಿನ ಮಟ್ಟ ಇತ್ತು. ಇದೀಗ ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ ಇಂದು 100.36 ಅಡಿಗೆ ಡ್ಯಾಂ ನೀರಿನ ಮಟ್ಟ ಏರಿಕೆಯಾಗಿದೆ.

ಮಳೆ ಬಿದ್ದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಇದರಿಂದ ಡ್ಯಾಂ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ತಮಿಳುನಾಡು ನೀರಿನ ಕ್ಯಾತೆಯ ನಡುವೆ ಕೆಆರ್‌ಎಸ್ 100 ಅಡಿ ಭರ್ತಿಯಾಗಿರೋದು ಸಮಾಧಾನಕರ ಸಂಗತಿಯಾಗಿದೆ. ನಿನ್ನೆ 11,800 ಕ್ಯೂಸೆಕ್ ಒಳಹರಿವು ಇತ್ತು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ನಿಂತಿರುವ ಪರಿಣಾಮ ಡ್ಯಾಂಗೆ ಇಂದು 9,052 ಕ್ಯೂಸೆಕ್ ಒಳಹರಿವು ಇದೆ. ನಾಳೆ ಇನ್ನಷ್ಟು ಪ್ರಮಾದಲ್ಲಿ ಒಳಹರಿವು ಕಡಿಮೆಯಾಗಲಿದೆ. ಇತ್ತ ಡ್ಯಾಂನಿಂದ ತಮಿಳುನಾಡಿಗೆ 1,482 ಕ್ಯೂಸೆಕ್ ಬಿಡುಗಡೆ ಮಾಡಲಾಗಿದೆ.

ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

4 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

5 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

11 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

11 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

13 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

14 hours ago