ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (KSNUAHS) ಆಡಳಿತ ಮಂಡಳಿಗೆ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರು ಇಬ್ಬರು ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಕಾರ್ಯಾಲಯವು ಜೂನ್ 22 ರಂದು ಅಧಿಸೂಚನೆ ಹೊರಡಿಸಿದೆ.
ಈ ಹಿಂದೆ ನಾಮನಿರ್ದೇಶನಗೊಂಡ ಸದಸ್ಯರ ಅವಧಿ ಜೂನ್ 25, 2026ಕ್ಕೆ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೊಸ ಸದಸ್ಯರನ್ನು ನೇಮಕ ಮಾಡಲಾಗಿದೆ. ಕೃಷಿ ಕ್ಷೇತ್ರದ ಖ್ಯಾತ ಶಿಕ್ಷಣ ತಜ್ಞರಾಗಿ ನಿವೃತ್ತ ಸಹ ಪ್ರಾಧ್ಯಾಪಕ ಹಾಗೂ ಹಿರಿಯ ಕೃಷಿ ಕ್ಷೇತ್ರ ಮೇಲ್ವಿಚಾರಕರಾದ ಟಿ. ಬಸವರಾಜ ನಾಯಕ್ ಹಾಗೂ ಕೃಷಿ ಕೈಗಾರಿಕೋದ್ಯಮಿ ಅಥವಾ ಮಹಿಳಾ ಸಮಾಜಸೇವಕರ ಕೋಟಾದಡಿ ಯೋಗೇಶ್ವರ ಎಚ್. ಆರ್. ಅವರನ್ನು ಆಡಳಿತ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದೆ. ಸದಸ್ಯರ ಅವಧಿಯು 2026ರ ಜೂನ್ 27ರಿಂದ ಮೂರು ವರ್ಷಗಳ ಕಾಲ ಇರಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
Karnataka Governor and Chancellor of Universities Thaawarchand Gehlot has nominated T. Basavaraj Naik and Yogeswara H.R. to the Board of Management of Keladi Shivappa Nayaka University of Agricultural and Horticultural Sciences, Shivamogga. Their three-year term will commence from June 27, 2026.
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…
ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…
ಕೇರಳ ಸರ್ಕಾರ ರಬ್ಬರ್ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…
ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…