ಮಂಗಳೂರು : ಕೊರೊನಾ ಸಾಂಕ್ರಾಮಿಕ ರೋಗವು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮದ ಸಾಮಾನ್ಯ, ವೇಗದೂತ ಹಾಗೂ ನಗರ ಸಾರಿಗೆಗಳಲ್ಲಿ ಪ್ರತಿ ನಿತ್ಯ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಬಸ್ಪಾಸ್ ಸೌಲಭ್ಯವಿದ್ದು ಮಂಗಳೂರು/ಸ್ಟೇಟ್ಬ್ಯಾಂಕ್-ಧರ್ಮಸ್ಥಳ, ಮಂಗಳೂರು/ಸ್ಟೇಟ್ಬ್ಯಾಂಕ್-ಉಪ್ಪಿನಂಗಡಿ, ಮಂಗಳೂರು/ಸ್ಟೇಟ್ಬ್ಯಾಂಕ್-ಸುಬ್ರಹ್ಮಣ್ಯ, ಮಂಗಳೂರು/ಸ್ಟೇಟ್ಬ್ಯಾಂಕ್-ಬಿ.ಸಿ.ರೋಡ್, ಮಂಗಳೂರು/ ಸ್ಟೇಟ್ಬ್ಯಾಂಕ್ – ಉಡುಪಿ, ಮಾರ್ಗಗಳಲ್ಲಿ ಸದರಿ ಮಾಸಿಕ ಪಾಸುಗಳನ್ನು ವಿತರಿಸಲಾಗುತ್ತದೆ. ಪಾಸು ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು ಇಂತಿವೆ- ಮಂಗಳೂರು ಬಸ್ನಿಲ್ದಾಣ ಮೊಬೈಲ್ ಸಂಖ್ಯೆ 7760990720, ಸ್ಟೇಟ್ಬ್ಯಾಂಕ್ ಬಸ್ಸು ನಿಲ್ದಾಣ ಮೊಬೈಲ್ ಸಂಖ್ಯೆ 9663266001, ಉಡುಪಿ ಬಸ್ನಿಲ್ದಾಣ ಮೊಬೈಲ್ ಸಂಖ್ಯೆ 9663266400, ಕುಂದಾಪುರ ಬಸ್ಸು ನಿಲ್ದಾಣ ಮೊಬೈಲ್ ಸಂಖ್ಯೆ 9663266009 ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಇವರ ಪ್ರಕಟಣೆ ತಿಳಿಸಿದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…