ಮಂಗಳೂರು : ಕೊರೊನಾ ಸಾಂಕ್ರಾಮಿಕ ರೋಗವು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮದ ಸಾಮಾನ್ಯ, ವೇಗದೂತ ಹಾಗೂ ನಗರ ಸಾರಿಗೆಗಳಲ್ಲಿ ಪ್ರತಿ ನಿತ್ಯ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಬಸ್ಪಾಸ್ ಸೌಲಭ್ಯವಿದ್ದು ಮಂಗಳೂರು/ಸ್ಟೇಟ್ಬ್ಯಾಂಕ್-ಧರ್ಮಸ್ಥಳ, ಮಂಗಳೂರು/ಸ್ಟೇಟ್ಬ್ಯಾಂಕ್-ಉಪ್ಪಿನಂಗಡಿ, ಮಂಗಳೂರು/ಸ್ಟೇಟ್ಬ್ಯಾಂಕ್-ಸುಬ್ರಹ್ಮಣ್ಯ, ಮಂಗಳೂರು/ಸ್ಟೇಟ್ಬ್ಯಾಂಕ್-ಬಿ.ಸಿ.ರೋಡ್, ಮಂಗಳೂರು/ ಸ್ಟೇಟ್ಬ್ಯಾಂಕ್ – ಉಡುಪಿ, ಮಾರ್ಗಗಳಲ್ಲಿ ಸದರಿ ಮಾಸಿಕ ಪಾಸುಗಳನ್ನು ವಿತರಿಸಲಾಗುತ್ತದೆ. ಪಾಸು ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು ಇಂತಿವೆ- ಮಂಗಳೂರು ಬಸ್ನಿಲ್ದಾಣ ಮೊಬೈಲ್ ಸಂಖ್ಯೆ 7760990720, ಸ್ಟೇಟ್ಬ್ಯಾಂಕ್ ಬಸ್ಸು ನಿಲ್ದಾಣ ಮೊಬೈಲ್ ಸಂಖ್ಯೆ 9663266001, ಉಡುಪಿ ಬಸ್ನಿಲ್ದಾಣ ಮೊಬೈಲ್ ಸಂಖ್ಯೆ 9663266400, ಕುಂದಾಪುರ ಬಸ್ಸು ನಿಲ್ದಾಣ ಮೊಬೈಲ್ ಸಂಖ್ಯೆ 9663266009 ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಇವರ ಪ್ರಕಟಣೆ ತಿಳಿಸಿದೆ.
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…