ಕೇರಳ ಸುದ್ದಿ | ಕೆಎಸ್‌ಆರ್‌ಟಿಸಿ ವೇತನ ಸಮಸ್ಯೆ | ಪಿಣರಾಯಿ ಭೇಟಿ ಮಾಡಿದ ಆಂಟನಿ ರಾಜು

May 12, 2022
10:18 PM

ಕೆಎಸ್‌ಆರ್‌ಟಿಸಿಯಲ್ಲಿನ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಸಾರಿಗೆ ಸಚಿವ ಆಂಟನಿ ರಾಜು ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದ್ದಾರೆ. ವೇತನ ವಿತರಣೆಯಲ್ಲಿನ ವಿಳಂಬದ ವಿರುದ್ಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿತ್ತು. ಪ್ರತಿ ತಿಂಗಳ ಐದನೇ ತಾರೀಕಿನೊಳಗೆ ವೇತನ ವಿತರಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿಗಳು ಮಧ್ಯಸ್ಥಿಕೆ ವಹಿಸುವಂತೆ ಸಚಿವರು ಕೋರಿದರು.

ಮೇ 10ರ ಗಡುವು ಮುಗಿದರೂ ವೇತನ ಪಾವತಿಸಲು ಕೆಎಸ್‌ಆರ್‌ಟಿಸಿ ಆಡಳಿತ ಮಂಡಳಿಗೆ ಸಾಧ್ಯವಾಗಿಲ್ಲ. ಆಡಳಿತಾರೂಢ ಎಲ್‌ಡಿಎಫ್‌ಗೆ ಸೇರಿದ ಕಾರ್ಮಿಕ ಸಂಘಟನೆಗಳು ಮುಷ್ಕರದಿಂದ ದೂರ ಉಳಿಯಲು ನಿರ್ಧರಿಸಿದ್ದರೆ, ಸಾರಿಗೆ ಪ್ರಜಾಸತ್ತಾತ್ಮಕ ಫೆಡರೇಷನ್ (ಐಎನ್‌ಟಿಯುಸಿ) ಘಟಕಗಳಾದ್ಯಂತ ನಿರಂತರ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಕೆಎಸ್‌ಆರ್‌ಟಿಸಿಯಲ್ಲಿ ಮತ್ತೊಂದು ಮಾನ್ಯತೆ ಪಡೆದ ಕಾರ್ಮಿಕ ಸಂಘಟನೆಯಾದ ಕೇರಳ ರಾಜ್ಯ ಸಾರಿಗೆ ನೌಕರರ ಸಂಘ (ಬಿಎಂಎಸ್) ಮುಂದಿನ ದಿನಗಳಲ್ಲಿ ವ್ಯಾಪಕ ಪ್ರತಿಭಟನೆಗಳನ್ನು ನಡೆಸಲು ನಿರ್ಧರಿಸಿದೆ. ಶುಕ್ರವಾರದ ಮುಷ್ಕರದಿಂದ ಕಾರ್ಯಾಚರಣೆಗೆ ಅಡ್ಡಿಯುಂಟಾದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸದಂತೆ ಆಡಳಿತ ಮಂಡಳಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.ನೌಕರರಿಗೆ ವೇತನ ನೀಡುವ ಜವಾಬ್ದಾರಿ ಆಡಳಿತ ಮಂಡಳಿಯ ಮೇಲಿದೆ ಎಂದು ರಾಜು ನಿಲುವು ತಳೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror