ಕೆಎಸ್ಆರ್ಟಿಸಿಯಲ್ಲಿನ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಸಾರಿಗೆ ಸಚಿವ ಆಂಟನಿ ರಾಜು ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದ್ದಾರೆ. ವೇತನ ವಿತರಣೆಯಲ್ಲಿನ ವಿಳಂಬದ ವಿರುದ್ಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿತ್ತು. ಪ್ರತಿ ತಿಂಗಳ ಐದನೇ ತಾರೀಕಿನೊಳಗೆ ವೇತನ ವಿತರಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿಗಳು ಮಧ್ಯಸ್ಥಿಕೆ ವಹಿಸುವಂತೆ ಸಚಿವರು ಕೋರಿದರು.
ಮೇ 10ರ ಗಡುವು ಮುಗಿದರೂ ವೇತನ ಪಾವತಿಸಲು ಕೆಎಸ್ಆರ್ಟಿಸಿ ಆಡಳಿತ ಮಂಡಳಿಗೆ ಸಾಧ್ಯವಾಗಿಲ್ಲ. ಆಡಳಿತಾರೂಢ ಎಲ್ಡಿಎಫ್ಗೆ ಸೇರಿದ ಕಾರ್ಮಿಕ ಸಂಘಟನೆಗಳು ಮುಷ್ಕರದಿಂದ ದೂರ ಉಳಿಯಲು ನಿರ್ಧರಿಸಿದ್ದರೆ, ಸಾರಿಗೆ ಪ್ರಜಾಸತ್ತಾತ್ಮಕ ಫೆಡರೇಷನ್ (ಐಎನ್ಟಿಯುಸಿ) ಘಟಕಗಳಾದ್ಯಂತ ನಿರಂತರ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಕೆಎಸ್ಆರ್ಟಿಸಿಯಲ್ಲಿ ಮತ್ತೊಂದು ಮಾನ್ಯತೆ ಪಡೆದ ಕಾರ್ಮಿಕ ಸಂಘಟನೆಯಾದ ಕೇರಳ ರಾಜ್ಯ ಸಾರಿಗೆ ನೌಕರರ ಸಂಘ (ಬಿಎಂಎಸ್) ಮುಂದಿನ ದಿನಗಳಲ್ಲಿ ವ್ಯಾಪಕ ಪ್ರತಿಭಟನೆಗಳನ್ನು ನಡೆಸಲು ನಿರ್ಧರಿಸಿದೆ. ಶುಕ್ರವಾರದ ಮುಷ್ಕರದಿಂದ ಕಾರ್ಯಾಚರಣೆಗೆ ಅಡ್ಡಿಯುಂಟಾದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸದಂತೆ ಆಡಳಿತ ಮಂಡಳಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.ನೌಕರರಿಗೆ ವೇತನ ನೀಡುವ ಜವಾಬ್ದಾರಿ ಆಡಳಿತ ಮಂಡಳಿಯ ಮೇಲಿದೆ ಎಂದು ರಾಜು ನಿಲುವು ತಳೆದರು.
ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…
ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…
ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ…
ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಮಲೆನಾಡು ಕರಾವಳಿಯ ಪ್ರದೇಶದ ಸರ್ಕಾರಿ ಶಾಲೆಗೆ ಹೋಗುವ ಅನೇಕ ಮಕ್ಕಳು ಹಳ್ಳ-ಹೊಳೆ ದಾಟಬೇಕು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490