ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್ ಚಲಾಯಿಸಿಕೊಂಡು ಹೋದ ಘಟನೆಯೊಂದು ಪುತ್ತೂರಿನಲ್ಲಿ ಗುರುವಾರ ನಡೆದಿದೆ.ಬಸ್ ನಿಲ್ದಾಣದಿಂದ ಹೊರಡುವ ವೇಳೆ ವಿದ್ಯಾರ್ಥಿ ರೈಟ್ ಪೋಯಿ ಎಂದು ಹೇಳಿದ್ದ ಹಾಗಾಗಿ ನಿರ್ವಾಹಕನೇ ರೈಟ್ ಪೋಯಿ ಎಂದು ಹೇಳಿದ್ದಾಗಿ ಭಾವಿಸಿಕೊಂಡು ಚಾಲಕ ಬಸ್ ಚಲಾಯಿಸಿದ್ದಾರೆ.
ಪುತ್ತೂರಿನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ಬಸ್ ಪುತ್ತೂರಿನಿಂದ ಹೊರಟು ಎಂ.ಟಿ.ರಸ್ತೆಯಾಗಿ ತಾಲೂಕು ಕಚೇರಿ ರಸ್ತೆ ದಾಟಿ ಮುಖ್ಯ ರಸ್ತೆಗೆ ಪ್ರವೇಶಿಸುತ್ತಿದ್ದಂತೆಯೇ ಚಾಲಕನಿಗೆ ಬಸ್ಸಿನಲ್ಲಿ ನಿರ್ವಾಹಕ ಇಲ್ಲದಿರುವುದು ಅರಿವಾಯಿತು. ಈ ಸಂದರ್ಭದಲ್ಲಿ ಬೇರೊಂದು ಕೆ.ಎಸ್.ಆರ್ .ಟಿ.ಸಿ. ಬಸ್ ಮೂಲಕ ನಿರ್ವಾಹಕ ಬಂದು ತನ್ನ ಕರ್ತವ್ಯದ ಬಸ್ ನ್ನು ಸೇರಿಕೊಂಡಿದ್ದಾರೆ.
ಚಾಲಕ ಮತ್ತು ನಿರ್ವಾಹಕನ ಎಡವಟ್ಟಿನಿಂದ ಸುಮಾರು 15 ನಿಮಿಷ ಸಮಯ ಬಸ್ ಸಂಚಾರ ತಡವಾಗಿದ್ದು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…
ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…
ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…
ಖಾರೀಫ್ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…