ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್ ಚಲಾಯಿಸಿಕೊಂಡು ಹೋದ ಘಟನೆಯೊಂದು ಪುತ್ತೂರಿನಲ್ಲಿ ಗುರುವಾರ ನಡೆದಿದೆ.ಬಸ್ ನಿಲ್ದಾಣದಿಂದ ಹೊರಡುವ ವೇಳೆ ವಿದ್ಯಾರ್ಥಿ ರೈಟ್ ಪೋಯಿ ಎಂದು ಹೇಳಿದ್ದ ಹಾಗಾಗಿ ನಿರ್ವಾಹಕನೇ ರೈಟ್ ಪೋಯಿ ಎಂದು ಹೇಳಿದ್ದಾಗಿ ಭಾವಿಸಿಕೊಂಡು ಚಾಲಕ ಬಸ್ ಚಲಾಯಿಸಿದ್ದಾರೆ.
ಪುತ್ತೂರಿನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ಬಸ್ ಪುತ್ತೂರಿನಿಂದ ಹೊರಟು ಎಂ.ಟಿ.ರಸ್ತೆಯಾಗಿ ತಾಲೂಕು ಕಚೇರಿ ರಸ್ತೆ ದಾಟಿ ಮುಖ್ಯ ರಸ್ತೆಗೆ ಪ್ರವೇಶಿಸುತ್ತಿದ್ದಂತೆಯೇ ಚಾಲಕನಿಗೆ ಬಸ್ಸಿನಲ್ಲಿ ನಿರ್ವಾಹಕ ಇಲ್ಲದಿರುವುದು ಅರಿವಾಯಿತು. ಈ ಸಂದರ್ಭದಲ್ಲಿ ಬೇರೊಂದು ಕೆ.ಎಸ್.ಆರ್ .ಟಿ.ಸಿ. ಬಸ್ ಮೂಲಕ ನಿರ್ವಾಹಕ ಬಂದು ತನ್ನ ಕರ್ತವ್ಯದ ಬಸ್ ನ್ನು ಸೇರಿಕೊಂಡಿದ್ದಾರೆ.
ಚಾಲಕ ಮತ್ತು ನಿರ್ವಾಹಕನ ಎಡವಟ್ಟಿನಿಂದ ಸುಮಾರು 15 ನಿಮಿಷ ಸಮಯ ಬಸ್ ಸಂಚಾರ ತಡವಾಗಿದ್ದು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.
ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ …
ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…
ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …
ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…
ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…