ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್ ಚಲಾಯಿಸಿಕೊಂಡು ಹೋದ ಘಟನೆಯೊಂದು ಪುತ್ತೂರಿನಲ್ಲಿ ಗುರುವಾರ ನಡೆದಿದೆ.ಬಸ್ ನಿಲ್ದಾಣದಿಂದ ಹೊರಡುವ ವೇಳೆ ವಿದ್ಯಾರ್ಥಿ ರೈಟ್ ಪೋಯಿ ಎಂದು ಹೇಳಿದ್ದ ಹಾಗಾಗಿ ನಿರ್ವಾಹಕನೇ ರೈಟ್ ಪೋಯಿ ಎಂದು ಹೇಳಿದ್ದಾಗಿ ಭಾವಿಸಿಕೊಂಡು ಚಾಲಕ ಬಸ್ ಚಲಾಯಿಸಿದ್ದಾರೆ.
ಪುತ್ತೂರಿನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ಬಸ್ ಪುತ್ತೂರಿನಿಂದ ಹೊರಟು ಎಂ.ಟಿ.ರಸ್ತೆಯಾಗಿ ತಾಲೂಕು ಕಚೇರಿ ರಸ್ತೆ ದಾಟಿ ಮುಖ್ಯ ರಸ್ತೆಗೆ ಪ್ರವೇಶಿಸುತ್ತಿದ್ದಂತೆಯೇ ಚಾಲಕನಿಗೆ ಬಸ್ಸಿನಲ್ಲಿ ನಿರ್ವಾಹಕ ಇಲ್ಲದಿರುವುದು ಅರಿವಾಯಿತು. ಈ ಸಂದರ್ಭದಲ್ಲಿ ಬೇರೊಂದು ಕೆ.ಎಸ್.ಆರ್ .ಟಿ.ಸಿ. ಬಸ್ ಮೂಲಕ ನಿರ್ವಾಹಕ ಬಂದು ತನ್ನ ಕರ್ತವ್ಯದ ಬಸ್ ನ್ನು ಸೇರಿಕೊಂಡಿದ್ದಾರೆ.
ಚಾಲಕ ಮತ್ತು ನಿರ್ವಾಹಕನ ಎಡವಟ್ಟಿನಿಂದ ಸುಮಾರು 15 ನಿಮಿಷ ಸಮಯ ಬಸ್ ಸಂಚಾರ ತಡವಾಗಿದ್ದು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್…
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…