ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್ ಚಲಾಯಿಸಿಕೊಂಡು ಹೋದ ಘಟನೆಯೊಂದು ಪುತ್ತೂರಿನಲ್ಲಿ ಗುರುವಾರ ನಡೆದಿದೆ.ಬಸ್ ನಿಲ್ದಾಣದಿಂದ ಹೊರಡುವ ವೇಳೆ ವಿದ್ಯಾರ್ಥಿ ರೈಟ್ ಪೋಯಿ ಎಂದು ಹೇಳಿದ್ದ ಹಾಗಾಗಿ ನಿರ್ವಾಹಕನೇ ರೈಟ್ ಪೋಯಿ ಎಂದು ಹೇಳಿದ್ದಾಗಿ ಭಾವಿಸಿಕೊಂಡು ಚಾಲಕ ಬಸ್ ಚಲಾಯಿಸಿದ್ದಾರೆ.
ಪುತ್ತೂರಿನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ಬಸ್ ಪುತ್ತೂರಿನಿಂದ ಹೊರಟು ಎಂ.ಟಿ.ರಸ್ತೆಯಾಗಿ ತಾಲೂಕು ಕಚೇರಿ ರಸ್ತೆ ದಾಟಿ ಮುಖ್ಯ ರಸ್ತೆಗೆ ಪ್ರವೇಶಿಸುತ್ತಿದ್ದಂತೆಯೇ ಚಾಲಕನಿಗೆ ಬಸ್ಸಿನಲ್ಲಿ ನಿರ್ವಾಹಕ ಇಲ್ಲದಿರುವುದು ಅರಿವಾಯಿತು. ಈ ಸಂದರ್ಭದಲ್ಲಿ ಬೇರೊಂದು ಕೆ.ಎಸ್.ಆರ್ .ಟಿ.ಸಿ. ಬಸ್ ಮೂಲಕ ನಿರ್ವಾಹಕ ಬಂದು ತನ್ನ ಕರ್ತವ್ಯದ ಬಸ್ ನ್ನು ಸೇರಿಕೊಂಡಿದ್ದಾರೆ.
ಚಾಲಕ ಮತ್ತು ನಿರ್ವಾಹಕನ ಎಡವಟ್ಟಿನಿಂದ ಸುಮಾರು 15 ನಿಮಿಷ ಸಮಯ ಬಸ್ ಸಂಚಾರ ತಡವಾಗಿದ್ದು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…