ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್ ಚಲಾಯಿಸಿಕೊಂಡು ಹೋದ ಘಟನೆಯೊಂದು ಪುತ್ತೂರಿನಲ್ಲಿ ಗುರುವಾರ ನಡೆದಿದೆ.ಬಸ್ ನಿಲ್ದಾಣದಿಂದ ಹೊರಡುವ ವೇಳೆ ವಿದ್ಯಾರ್ಥಿ ರೈಟ್ ಪೋಯಿ ಎಂದು ಹೇಳಿದ್ದ ಹಾಗಾಗಿ ನಿರ್ವಾಹಕನೇ ರೈಟ್ ಪೋಯಿ ಎಂದು ಹೇಳಿದ್ದಾಗಿ ಭಾವಿಸಿಕೊಂಡು ಚಾಲಕ ಬಸ್ ಚಲಾಯಿಸಿದ್ದಾರೆ.
ಪುತ್ತೂರಿನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ಬಸ್ ಪುತ್ತೂರಿನಿಂದ ಹೊರಟು ಎಂ.ಟಿ.ರಸ್ತೆಯಾಗಿ ತಾಲೂಕು ಕಚೇರಿ ರಸ್ತೆ ದಾಟಿ ಮುಖ್ಯ ರಸ್ತೆಗೆ ಪ್ರವೇಶಿಸುತ್ತಿದ್ದಂತೆಯೇ ಚಾಲಕನಿಗೆ ಬಸ್ಸಿನಲ್ಲಿ ನಿರ್ವಾಹಕ ಇಲ್ಲದಿರುವುದು ಅರಿವಾಯಿತು. ಈ ಸಂದರ್ಭದಲ್ಲಿ ಬೇರೊಂದು ಕೆ.ಎಸ್.ಆರ್ .ಟಿ.ಸಿ. ಬಸ್ ಮೂಲಕ ನಿರ್ವಾಹಕ ಬಂದು ತನ್ನ ಕರ್ತವ್ಯದ ಬಸ್ ನ್ನು ಸೇರಿಕೊಂಡಿದ್ದಾರೆ.
ಚಾಲಕ ಮತ್ತು ನಿರ್ವಾಹಕನ ಎಡವಟ್ಟಿನಿಂದ ಸುಮಾರು 15 ನಿಮಿಷ ಸಮಯ ಬಸ್ ಸಂಚಾರ ತಡವಾಗಿದ್ದು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…