ಕೆಎಸ್ಆರ್ ಟಿಸಿ (KSRTC) ವತಿಯಿಂದ ಉಡುಪಿ ಸುತ್ತಮುತ್ತಲಿನ 9 ದೇವಸ್ಥಾನಗಳನ್ನು ಸಂದರ್ಶಿಸಿ ಉಚ್ಚಿಲ ದಸರಾ ದರ್ಶನ ಪ್ಯಾಕೇಜ್ ಪ್ರವಾಸ ಸೆ.30 ರಿಂದ ಅ.4ರವರೆಗೆ ಹಮ್ಮಿಕೊಂಡಿದೆ.
ದರ್ಶನದ ಸ್ಥಳ ಹಾಗೂ ಪ್ರಯಾಣ ದರ ಹೀಗಿದೆ : ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಬೆಳಗ್ಗೆ 8.30ಕ್ಕೆ ಹೊರಟು 8.45ಕ್ಕೆ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ, 9.30ಕ್ಕೆ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ, 10.15ಕ್ಕೆ ಅಂಬಲಪಾಡಿ ಶ್ರೀ ಮಹಾಕಾಳಿ ದೇವಸ್ಥಾನ, 11ಕ್ಕೆ ಪುತ್ತೂರು ಭಗವತೀ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, 12.15ಕ್ಕೆ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, 2.15ಕ್ಕೆ ನೀಲಾವರ ಶ್ರೀ ಮಹಿಷಮರ್ಧಿನಿ ದೇವಸ್ಥಾನ, 3ಕ್ಕೆ ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನ, 4ಕ್ಕೆ ಕಾಪು ಶ್ರೀ ಮಾರಿಗುಡಿ ದೇವಸ್ಥಾನ, 5ಕ್ಕೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ, 6.30ಕ್ಕೆ ಉಡುಪಿ ಸಿಟಿ ಬಸ್ ನಿಲ್ದಾಣಕ್ಕೆ ಆಗಮಿಸಲಿದೆ.
ಈ ಪ್ಯಾಕೇಜ್ ಪ್ರವಾಸಕ್ಕೆ ಪ್ರತಿ ಪ್ರಯಾಣಿಕರಿಗೆ ಪ್ರಯಾಣ ದರ (ಊಟ ಉಪಹಾರ ಹೊರತು ವಯಸ್ಕರಿಗೆ ರೂ. 300/ ಮಕ್ಕಳಿಗೆ ( ವರ್ಷದಿಂದ 12 ವರ್ಷದವರಿಗೆ) ರೂ. 250/. ಹೆಚ್ಚಿನ ಮಾಹಿತಿಗಳಿಗೆ ಈ ದೂರವಾಣಿ ಸಂಖ್ಯೆ : 7795984182 ಸಂಪರ್ಕಿಸಬಹುದು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…