ಇಂದಿನಿಂದ 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ.ಮಕ್ಕಳು ಮತ್ತೆ ಶಾಲೆಗೆ ಖುಷಿಯಿಂದ ತೆರಳಿದ್ದಾರೆ. ಅನೇಕ ವಿದ್ಯಾರ್ಥಿಗಳು ಬಸ್ ಮೂಲಕ ತೆರಳಬೇಕಾಗುತ್ತೆ. ಹಾಗಾಗಿ ಬಸ್ ಪಾಸ್ ಮಾಡಿಸಿಕೊಳ್ಳುವ ತರಾತುರಿ. ಶಾಲೆ ಆರಂಭವಾಗುತ್ತಿದ್ದಂತೆ ಬಸ್ ಪಾಸ್ ಮಾಡಿಕೊಳ್ಳಲು ಮಕ್ಕಳಿಗೆ ಕಷ್ಟವಾಗುತ್ತದೆ.
ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಮೇ 31 ರಂದು ಕೆಎಸ್ಆರ್ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸನ್ನೇ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಇಲ್ಲದಿದ್ರೆ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಬೇಕೆಂದು ಕೆಎಸ್ಆರ್ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…