ಇಂದಿನಿಂದ 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ.ಮಕ್ಕಳು ಮತ್ತೆ ಶಾಲೆಗೆ ಖುಷಿಯಿಂದ ತೆರಳಿದ್ದಾರೆ. ಅನೇಕ ವಿದ್ಯಾರ್ಥಿಗಳು ಬಸ್ ಮೂಲಕ ತೆರಳಬೇಕಾಗುತ್ತೆ. ಹಾಗಾಗಿ ಬಸ್ ಪಾಸ್ ಮಾಡಿಸಿಕೊಳ್ಳುವ ತರಾತುರಿ. ಶಾಲೆ ಆರಂಭವಾಗುತ್ತಿದ್ದಂತೆ ಬಸ್ ಪಾಸ್ ಮಾಡಿಕೊಳ್ಳಲು ಮಕ್ಕಳಿಗೆ ಕಷ್ಟವಾಗುತ್ತದೆ.
ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಮೇ 31 ರಂದು ಕೆಎಸ್ಆರ್ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸನ್ನೇ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಇಲ್ಲದಿದ್ರೆ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಬೇಕೆಂದು ಕೆಎಸ್ಆರ್ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…