ಇಂದಿನಿಂದ 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ.ಮಕ್ಕಳು ಮತ್ತೆ ಶಾಲೆಗೆ ಖುಷಿಯಿಂದ ತೆರಳಿದ್ದಾರೆ. ಅನೇಕ ವಿದ್ಯಾರ್ಥಿಗಳು ಬಸ್ ಮೂಲಕ ತೆರಳಬೇಕಾಗುತ್ತೆ. ಹಾಗಾಗಿ ಬಸ್ ಪಾಸ್ ಮಾಡಿಸಿಕೊಳ್ಳುವ ತರಾತುರಿ. ಶಾಲೆ ಆರಂಭವಾಗುತ್ತಿದ್ದಂತೆ ಬಸ್ ಪಾಸ್ ಮಾಡಿಕೊಳ್ಳಲು ಮಕ್ಕಳಿಗೆ ಕಷ್ಟವಾಗುತ್ತದೆ.
ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಮೇ 31 ರಂದು ಕೆಎಸ್ಆರ್ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸನ್ನೇ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಇಲ್ಲದಿದ್ರೆ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಬೇಕೆಂದು ಕೆಎಸ್ಆರ್ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…