ದೂರದ ಊರಿನಲ್ಲಿರುವ ಸಂಬಂಧಿಕರಿಗೆ ಏನಾದ್ರು ಪಾರ್ಸೆಲ್ ಕಳಿಸಬೇಕಾದ್ರೆ ತಟ್ಟನೆ ನೆನಪು ಬರೋದು ಕೆಎಸ್ಆರ್ಟಿಸಿ. ಚಾಲಕನಿಗೂ, ನಿರ್ವಹಕನಿಗೂ ಏನಾದರೂ ಗೌರವಧನ ಕೊಟ್ಟರೆ ಆಯ್ತು, ಪಾರ್ಸೆಲ್ ಖಚಿತವಾಗಿಯೂ ತಲಪುತ್ತೆ ಎನ್ನುವ ನಂಬಿಕೆ. ಹೆಚ್ಚಿನ ಬಸ್ ಗಳಲ್ಲಿ ಈ ಸೇವೆ ಇದೆ. ಜನ ಮಾತ್ರವಲ್ಲದೆ ಸರಕುಗಳನ್ನು ಕೆಎಸ್ಆರ್ಟಿಸಿ ಸಾಗಿಸುತ್ತದೆ. ಇನ್ನು ಮೇಲೆ ಭವಿಷ್ಯದಲ್ಲಿ ಸರಕು ಸಾಗಾಣಿಕೆ ವ್ಯವಹಾರದ ಮೇಲೆ ಕಣ್ಣಿಟ್ಟು ಲಾರಿಗಳನ್ನು ಖರೀದಿಸಲು ಮುಂದಾಗಿದೆ ಕೆಎಸ್ಆರ್ಟಿಸಿ.
ಕೆಎಸ್ಆರ್ಟಿಸಿ #KSRTC ಶೀಘ್ರದಲ್ಲೇ ಲಾರಿಗಳ ಸೇವೆ ಒದಗಿಸಲಿದೆ. ಈ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿದೆ. ಸರಕು #Goods ಸಾಗಾಣಿಕೆಗಾಗಿಯೇ ಪ್ರತ್ಯೇಕ ವಾಹನಗಳ ಸೇವೆ ಒದಗಿಸಲು ಕೆಎಸ್ಆರ್ಟಿಸಿ ಮುಂದಾಗಿದೆ. ಸರಕು ಸಾಗಾಣಿಕೆ ಸೇವೆಯನ್ನು ನೀಡಲು ಲಾರಿಗಳನ್ನು ಒದಗಿಸಲು ಮುಂದಾಗುತ್ತಿದೆ. ಪ್ರಸ್ತುತ KSRTC ತನ್ನ ಸರಕು ಸಾಗಾಣಿಕೆಗಳನ್ನು ಬಸ್ಗಳಲ್ಲೇ ಪಾರ್ಸೆಲ್ ಮೂಲಕ ಸಾಗಣೆ ಮಾಡುತ್ತದೆ. ಆದರೆ ಭವಿಷ್ಯದಲ್ಲಿ ಸರಗು ಸಾಗಾಣಿಕೆ ವ್ಯವಹಾರದ ಮೇಲೆ ಕಣ್ಣಿಟ್ಟು ಲಾರಿಗಳನ್ನು ಖರೀದಿಸಲು ಮುಂದಾಗಿದೆ.
ಯೋಜನೆಯ ಮೊದಲ ಹಂತದ ಭಾಗವಾಗಿ ಒಟ್ಟು 10 KSRTC ಲಾರಿಗಳು ಸೇವೆ ಒದಗಿಸಲಿವೆ ಎನ್ನಲಾಗಿದೆ. ಇತ್ತ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾಗಿರುವ ಶಕ್ತಿ ಯೋಜನೆಗೆ ನಾಡಿನಾದ್ಯಂತ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದೆ. ಸಾವಿರಾರು ಮಹಿಳೆಯರು ಯೋಜನೆಯ ಲಾಭವನ್ನು ತಮ್ಮ ಪ್ರತಿನಿತ್ಯದ ಜೀವನದಲ್ಲಿ ಪಡೆದುಕೊಳ್ಳುತ್ತಿದ್ದಾರೆ. ಜೊತೆಗೆ ಕೆಎಸ್ಆರ್ಟಿಸಿ ಬಸ್ ಸೇರಿದಂತೆ ಸರ್ಕಾರಿ ಸಾರಿಗೆ ವಾಹನಗಳಲ್ಲಿ ವೆಹಿಕಲ್ ಟ್ರ್ಯಾಕಿಂಗ್ ವ್ಯವಸ್ಥೆ ಹಾಗೂ ಪ್ಯಾನಿಕ್ ಬಟನ್ ವ್ಯವಸ್ಥೆ ಅಳವಡಿಕೆಗೆ 30.74 ಕೋಟಿ ರೂಪಾಯಿ ವೆಚ್ಚದ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆಗೆ ಸಂಪುಟ ಅಸ್ತು ಎಂದಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…