ಕೆ ಎಸ್ ಆರ್ ಟಿ ಸಿ ಬಸ್ ಸಿಬಂದಿಗಳ ಮುಷ್ಕರದಿಂದಾಗಿ ಪ್ರಯಾಣಿಕರು ಹಾಗೂ ಕೃಷಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಸಾರಿಗೆ ವ್ಯವಸ್ಥೆ ಸುಗಮವಾಗಲು ಹಾಗೂ ಕೆ ಎಸ್ ಆರ್ ಟಿ ಸಿ ಸಿಬಂದಿಗಳ ಮುಷ್ಕರ ಮುಗಿಯುವವರೆಗೆ ದ ಕ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಅಟೋ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಬಿ ಎಂ ಎಸ್ ಅಟೋ ವಿಭಾಗದ ಸುಳ್ಯ ತಾಲೂಕಿನ ಗುತ್ತಿಗಾರು ಘಟಕದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಕಡೋಡಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಕಳೆದ ಬಾರಿಯೂ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾದಾಗ ಬಿ ಎಂ ಎಸ್ ಘಟಕದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಅವರು ಅಟೋಗಳಿಗೆ ಎಲ್ಲಾ ತಾಲೂಕುಗಳಿಗೆ ಸಂಚಾರಕ್ಕೆ ಮುಷ್ಕರ ಮುಗಿಯುವವರೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರಲ್ಲದೆ, ಕೆಲವು ಪ್ರದೇಶಗಳಿಗೆ ಸೇವಾ ದೃಷ್ಟಿಯಿಂದ ಉಚಿತವಾಗಿ ಪ್ರಯಾಣಿಕರನ್ನು ಕರೆದೊಯ್ಯುವ ಬಗ್ಗೆಯೂ ಈ ಹಿಂದೆ ಯೋಜನೆ ಮಾಡಿದ್ದರು. ಇದೀಗ ಮತ್ತೆ ಕೆ ಎಸ್ ಆರ್ ಟಿ ಸಿ ಸಿಬಂದಿಗಳ ಮುಷ್ಕರದಿಂದ ಪ್ರಯಾಣಿಕರಿಗೆ ಸಮಸ್ಯೆಯಾಗದಂತೆ ಅಟೋಗಳನ್ನು ಬಳಕೆ ಮಾಡಬಹುದು ಎಂಬುದು ಚಂದ್ರಶೇಖರ್ ಅವರ ಯೋಜನೆಯಾಗಿದೆ. ಸಂಬಂಧಿತ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬಹುದಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…