ಕೆ ಎಸ್ ಆರ್ ಟಿ ಸಿ ಬಸ್ ಸಿಬಂದಿಗಳ ಮುಷ್ಕರದಿಂದಾಗಿ ಪ್ರಯಾಣಿಕರು ಹಾಗೂ ಕೃಷಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಸಾರಿಗೆ ವ್ಯವಸ್ಥೆ ಸುಗಮವಾಗಲು ಹಾಗೂ ಕೆ ಎಸ್ ಆರ್ ಟಿ ಸಿ ಸಿಬಂದಿಗಳ ಮುಷ್ಕರ ಮುಗಿಯುವವರೆಗೆ ದ ಕ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಅಟೋ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಬಿ ಎಂ ಎಸ್ ಅಟೋ ವಿಭಾಗದ ಸುಳ್ಯ ತಾಲೂಕಿನ ಗುತ್ತಿಗಾರು ಘಟಕದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಕಡೋಡಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಕಳೆದ ಬಾರಿಯೂ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾದಾಗ ಬಿ ಎಂ ಎಸ್ ಘಟಕದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಅವರು ಅಟೋಗಳಿಗೆ ಎಲ್ಲಾ ತಾಲೂಕುಗಳಿಗೆ ಸಂಚಾರಕ್ಕೆ ಮುಷ್ಕರ ಮುಗಿಯುವವರೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರಲ್ಲದೆ, ಕೆಲವು ಪ್ರದೇಶಗಳಿಗೆ ಸೇವಾ ದೃಷ್ಟಿಯಿಂದ ಉಚಿತವಾಗಿ ಪ್ರಯಾಣಿಕರನ್ನು ಕರೆದೊಯ್ಯುವ ಬಗ್ಗೆಯೂ ಈ ಹಿಂದೆ ಯೋಜನೆ ಮಾಡಿದ್ದರು. ಇದೀಗ ಮತ್ತೆ ಕೆ ಎಸ್ ಆರ್ ಟಿ ಸಿ ಸಿಬಂದಿಗಳ ಮುಷ್ಕರದಿಂದ ಪ್ರಯಾಣಿಕರಿಗೆ ಸಮಸ್ಯೆಯಾಗದಂತೆ ಅಟೋಗಳನ್ನು ಬಳಕೆ ಮಾಡಬಹುದು ಎಂಬುದು ಚಂದ್ರಶೇಖರ್ ಅವರ ಯೋಜನೆಯಾಗಿದೆ. ಸಂಬಂಧಿತ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬಹುದಾಗಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…