ಕೆ ಎಸ್ ಆರ್ ಟಿ ಸಿ ಬಸ್ ಸಿಬಂದಿಗಳ ಮುಷ್ಕರದಿಂದಾಗಿ ಪ್ರಯಾಣಿಕರು ಹಾಗೂ ಕೃಷಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಸಾರಿಗೆ ವ್ಯವಸ್ಥೆ ಸುಗಮವಾಗಲು ಹಾಗೂ ಕೆ ಎಸ್ ಆರ್ ಟಿ ಸಿ ಸಿಬಂದಿಗಳ ಮುಷ್ಕರ ಮುಗಿಯುವವರೆಗೆ ದ ಕ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಅಟೋ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಬಿ ಎಂ ಎಸ್ ಅಟೋ ವಿಭಾಗದ ಸುಳ್ಯ ತಾಲೂಕಿನ ಗುತ್ತಿಗಾರು ಘಟಕದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಕಡೋಡಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಕಳೆದ ಬಾರಿಯೂ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾದಾಗ ಬಿ ಎಂ ಎಸ್ ಘಟಕದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಅವರು ಅಟೋಗಳಿಗೆ ಎಲ್ಲಾ ತಾಲೂಕುಗಳಿಗೆ ಸಂಚಾರಕ್ಕೆ ಮುಷ್ಕರ ಮುಗಿಯುವವರೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರಲ್ಲದೆ, ಕೆಲವು ಪ್ರದೇಶಗಳಿಗೆ ಸೇವಾ ದೃಷ್ಟಿಯಿಂದ ಉಚಿತವಾಗಿ ಪ್ರಯಾಣಿಕರನ್ನು ಕರೆದೊಯ್ಯುವ ಬಗ್ಗೆಯೂ ಈ ಹಿಂದೆ ಯೋಜನೆ ಮಾಡಿದ್ದರು. ಇದೀಗ ಮತ್ತೆ ಕೆ ಎಸ್ ಆರ್ ಟಿ ಸಿ ಸಿಬಂದಿಗಳ ಮುಷ್ಕರದಿಂದ ಪ್ರಯಾಣಿಕರಿಗೆ ಸಮಸ್ಯೆಯಾಗದಂತೆ ಅಟೋಗಳನ್ನು ಬಳಕೆ ಮಾಡಬಹುದು ಎಂಬುದು ಚಂದ್ರಶೇಖರ್ ಅವರ ಯೋಜನೆಯಾಗಿದೆ. ಸಂಬಂಧಿತ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬಹುದಾಗಿದೆ.
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…