Advertisement
MIRROR FOCUS

#ಬೀದಿಮಡೆಸ್ನಾನ | ಕುಕ್ಕೆಯ ಈ ಸೇವೆಯ ಅನುಭವವೇ ರೋಮಾಂಚನ…. ! | ಎರಡು ಕಿಮೀ ರಸ್ತೆಯಲ್ಲಿ ಉರುಳು ಸೇವೆ…. |

Share

ಈ ಸೇವೆಗೆ ಭಗವಂತ ಒಲಿಯುವ…!. ಹೀಗೆಂದು ಉದ್ಗಾರ ತೆಗೆದರು…!. ಅನೇಕರು ಸೇವಾರ್ಥಿಗೆ ನಮಿಸಿದರು….! ಇನ್ನೂ ಕೆಲವರು ಹುಬ್ಬೇರಿಸಿದರು…!. ಏಕೆಂದರೆ ಈ ಸೇವೆಯೇ ಹಾಗೆ…!. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಸಮಯದಲ್ಲಿ  ನಡೆಯುವ ಬೀದಿಮಡೆಸ್ನಾನ. ಕುಮಾರಧಾರಾ ನದಿಯಲ್ಲಿ ಸ್ನಾನ ಮಾಡಿ  ರಸ್ತೆಯಲ್ಲಿ ಉರುಳುತ್ತಾ ದೇವಸ್ಥಾನಕ್ಕೆ ತೆರಳುವುದು ಈ ಸೇವೆಯ ಮಹತ್ವ. 1992 ರಿಂದಲೂ ಉರುಳು ಸೇವೆ ಮಾಡುತ್ತಿರುವ ಸಿದ್ಧಿವಿನಾಯಕಭಟ್‌  ಚೂಂತಾರು ಅವರ ಅನುಭವ ಅನೇಕ ಭಕ್ತರಿಗೆ ರೋಮಾಂಚನವಾಗುತ್ತದೆ.

ಬೀದಿ ಮಡೆಸ್ನಾನದ ವಿಡಿಯೋ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ನಾಡಿನ ಶ್ರೀಮಂತ ದೇವಸ್ಥಾನ. ಅನೇಕ ಸೇವೆಗಳು ಭಗವಂತನಿಗೆ ನಡೆಯುತ್ತಿದೆ. ಈ ಸೇವೆ ವರ್ಷದಲ್ಲಿ ಕೆಲವೇ ದಿನ ಮಾತ್ರಾ ನಡೆಯುತ್ತದೆ. ಅದು ಬೀದಿ ಮಡೆಸ್ನಾನ. ದೇವಸ್ಥಾನಕ್ಕೆ ಯಾವುದೇ ಶುಲ್ಕ ನೀಡದೆ ಮಾಡುವ ಈ ಸೇವೆಯಲ್ಲಿ ಮನೋಬಲದ ಪರೀಕ್ಷೆ, ದೇಹ ಪರೀಕ್ಷೆಯನ್ನೂ ಭಗವಂತ ಮಾಡುವ….! ಏಕೆಂದರೆ ಸುಮಾರು ಎರಡು ಕಿಮೀ ದೂರ ರಸ್ತೆಯಲ್ಲಿ ಉರುಳುತ್ತಾ ಸಾಗುವುದು  ಎಂದರೆ ಅದು ದೇಹದ ಪರೀಕ್ಷೆ ಹಾಗೂ ಮನಸ್ಸಿನ ಪರೀಕ್ಷೆಯೇ ಆಗಿದೆ. ಇಂತಹ ಪ್ರತೀ ಸೇವೆ ವರ್ಷ ಸುಮಾರು 200 ರಿಂದ 300 ಜನರು ಮಾಡುತ್ತಾರೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಲ್ಲಿಸುವ ಈ  ವಿಶಿಷ್ಟ ಸೇವೆ ಬೀದಿಮಡೆಸ್ನಾನ ಲಕ್ಷ ದೀಪೋತ್ಸವದ ರಥೋತ್ಸವದ ಬಳಿಕ ಆರಂಭಿಸಿ, ಚಂಪಾಷಷ್ಠಿ ಮಹಾರಥೋತ್ಸವದ ತನಕ ನೆರವೇರಿಸುತ್ತಾರೆ. ಭಕ್ತರು ಹಿಂದೆ ತಾವು ಪ್ರಾರ್ಥಿಸಿಕೊಂಡ  ಇಷ್ಟಾರ್ಥ ನೆರವೇರಿದ ಬಳಿಕ ದೇವರ ಎದುರು ಪ್ರಾರ್ಥನೆ ಸಲ್ಲಿಸಿ ಅರ್ಚಕರಿಂದ ಪ್ರಸಾದವನ್ನು ಸ್ವೀಕರಿಸಿ ನಂತರ ಕುಮಾರಧಾರ ಸ್ನಾನ ಘಟ್ಟಕ್ಕೆ ತೆರಳಿ ನದಿಯಲ್ಲಿ ಮಿಂದು ಅಲ್ಲಿಂದ ಉರುಳು ಸೇವೆ ಪ್ರಾರಂಭ ಮಾಡುತ್ತಾರೆ. ರಸ್ತೆಯಲ್ಲಿ ಉರುಳುತ್ತಾ ರಥಬೀದಿ ತಲುಪಿ ದೇವಸ್ಥಾನದ ಒಳಾಂಗಣಕ್ಕೆ ಆಗಮಿಸಿ ದೇವಳಕ್ಕೆ ಪ್ರದಕ್ಷಿಣೆ ಹಾಕಿ ಮೂಡು ಬಾಗಿಲಿನಲ್ಲಿ ಹೊರ ಹೋಗಿ ಎದುರಿನ ದರ್ಪಣ ತೀರ್ಥ ನದಿಗೆ ಬಿದ್ದು ತಮ್ಮ ಉರುಳುಸೇವೆಯನ್ನು ಸಮಾಪ್ತಿ ಮಾಡುತ್ತಾರೆ. ದರ್ಪಣ ತೀರ್ಥದಲ್ಲಿ ಸ್ನಾನದ ನಂತರ ಶ್ರೀ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸುತ್ತಾರೆ.

ಈ ಸೇವೆಯನ್ನು ಭಕ್ತರು ಸ್ವಯಂ ಸ್ಪೂರ್ತಿಯಿಂದ ಮತ್ತು ಭಕ್ತಿಯಿಂದ ನೆರವೇರಿಸುತ್ತಾರೆ. ಈ ಸೇವೆಗೆ ಯಾವುದೇ ಶುಲ್ಕವಿರುವುದಿಲ್ಲ. ಸುಮಾರು 2 ಕಿಲೋಮೀಟರಿನಷ್ಟಿರುವ ದೂರವನ್ನು ಉರುಳು ಸೇವೆ ಮಾಡುವ ಭಕ್ತರು ಅವರವರ ಸಾಮರ್ಥ್ಯದ ಅನುಗುಣವಾಗಿ 1 ರಿಂದ 5 ಗಂಟೆ ವರೆಗೂ ತೆಗೆದುಕೊಳ್ಳುತ್ತಾರೆ.

 

ಉರುಳು ಸೇವೆ ಮಾಡುವವರು ವ್ರತವನ್ನು ಕೈಗೊಂಡಿರುತ್ತಾರೆ. ಕುಕ್ಕೆ ಸುಬ್ರಹ್ಮಣ್ಯ ದೇವರ ಆರಾಧನೆಯ ಅತೀ ದೊಡ್ಡ ಹಾಗೂ ಕಠಿಣ  ಸೇವೆ ಇದಾಗಿದೆ. ಪುರುಷ, ಮಹಿಳೆ, ಮಕ್ಕಳು ಹಾಗೂ ವೃದ್ದರೂ ಈ ಸೇವೆಯನ್ನು ಮಾಡುತ್ತಾರೆ. ಹೀಗೆ ಉರುಳು ಸೇವೆ ಮಾಡುವವರ ಜೊತೆಯಲ್ಲಿ ದಾಸಯ್ಯರು ತಮ್ಮ ಶಂಖ ಜಾಗಟೆಯೊಂದಿಗೆ ಗೋವಿಂದಾ……. ಗೋವಿಂದಾ……. ಕೂಗುತ್ತಾ ದೇವರ ಪರಾಕುಗಳನ್ನು ಹೇಳುತ್ತಾ ಸಾಗುತ್ತಾರೆ. ಹೆಚ್ಚಾಗಿ ಮುಂಜಾನೆ ಮತ್ತು ಸಂಜೆಯ ಸಮಯದಲ್ಲಿ ಭಕ್ತರು ಈ ಸೇವೆಯನ್ನು ಆರಂಭಿಸುತ್ತಾರೆ. ಜಾತಿ, ಮತ, ಲಿಂಗ, ವರ್ಗ, ಪ್ರಾಯ, ಭೇದ ಮರೆತು ದೇವರಿಗೆ ಸಂಪೂರ್ಣ ಶರಣಾಗುವ ಈ ಸೇವೆ ಮಹತ್ವ ಪಡೆದಿದೆ.

ದೇವಸ್ಥಾನದ ಆಡಳಿತವು ಇಂತಹ ಸೇವಾರ್ಥಿಗಳಿಗೆ ಅನುಕೂಲವಾಗುವಂತೆ ಕುಮಾರಧಾರಾದಿಂದ ಸುಬ್ರಹ್ಮಣ್ಯದವರೆಗಿನ ರಸ್ತೆಯಲ್ಲಿ ಉತ್ತಮ ವ್ಯವಸ್ಥೆ ಮಾಡುತ್ತದೆ. ಈ ಬಾರಿ ಚತುಷ್ಟಥ ರಸ್ತೆಯ ಒಂದು ಬದಿಯನ್ನು ಉರುಳು ಸೇವೆ ಮಾಡುವವರಿಗಾಗಿಯೇ ವ್ಯವಸ್ಥೆ ಮಾಡಿದೆ. ಸ್ವಯಂಸೇವಕರು, ಸಂಘಸಂಸ್ಥೆಗಳು ಹಾಗೂ ದೇವಸ್ಥಾನದ ಆಡಳಿತ ಸೇರಿ ಇಡೀ ರಸ್ತೆ ಸ್ವಚ್ಛತೆಯ ಕಾರ್ಯವನ್ನೂ ಮಾಡಿದೆ. ಸಂಜೆಯ ವೇಳೆ ರಸ್ತೆಗೆ ನೀರು ಸುರಿಯುವ ಮೂಲಕ ರಸ್ತೆ ತೊಳೆದು ಸ್ವಚ್ಛ ಮಾಡಲಾಗಿದೆ.

1992 ರಿಂದ ಉರುಳು ಸೇವೆ...!

ಅನೇಕ ವರ್ಷಗಳಿಂದ ನಡೆಯುತ್ತಿರುವ ಈ ಉರುಳು ಸೇವೆಯಲ್ಲಿ ಸಾಕಷ್ಟು ಭಕ್ತರು ತೊಡಗಿಸಿಕೊಂಡಿದ್ದಾರೆ. ಅದರಲ್ಲಿ ಚೊಕ್ಕಾಡಿ ಬಳಿಯ ಶೇಣಿಯ ಸಿದ್ಧಿವಿನಾಯಕ ಭಟ್‌ ಚೂಂತಾರು ಅವರು 1992  ರಿಂದ ಈ ಉರುಳು ಸೇವೆ ಮಾಡುತ್ತಿದ್ದಾರೆ. ತಮ್ಮ ಸಂಕಲ್ಪ ಈಡೇರಿಕೆಗಾಗಿ ಆರಂಭದಲ್ಲಿ ಸೇವೆ ಮಾಡಿದ ಅವರು ಆ ಬಳಿಕ ಸೇವಾ ನೆಲೆಯಲ್ಲಿ ಈ ಸೇವೆ ಮಾಡುತ್ತಿದ್ದಾರೆ. ನಾಡಿನ ಸಮಸ್ತರಿಗೂ ಒಳಿತಾಗಲಿ ,” ಲೋಕಾ ಸಮಸ್ತಾ ಸುಖೀನೋ ಭವಂತು…” ಎನ್ನುವುದೇ ಈಗಿನ ಸಂಕಲ್ಪ ಎನ್ನುವ ಸಿದ್ಧಿವಿನಾಯಕ ಭಟ್‌ ಅವರು ಅನುಭವ ಕೇಳಿದರೆ ಮೈ ರೋಮಾಂಚನವಾಗುತ್ತದೆ ಎಂದು ಹಲವು ಭಕ್ತರು ಹೇಳುತ್ತಾರೆ.

ಸಿದ್ಧಿವಿನಾಯಕ ಭಟ್‌ ಚೂಂತಾರು ಅವರು ಹೇಳುವ ಹಾಗೆ,” ಕುಮಾರಧಾರಾ ನದಿಯಲ್ಲಿ ಸ್ನಾನ ಮಾಡಿ ಬಳಿಕ ಉರುಳುತ್ತಾ ಬರುವಾಗ ಯಾವುದೇ ಗೋಚರ ಇರುವುದಿಲ್ಲ, ಶಂಖ ನಾದವು.. ಭಗವಂತ ಕರೆದಂತೆ ಕೇಳುತ್ತದೆ, ರಸ್ತೆ ಬದಿಯಲ್ಲಿ ಸಾಗುವ ಜನರು ಒಂದು ಬಿಂದುವಾಗಿ ಗೋಚರವಾಗುತ್ತದೆ”

ಕುಮರಧಾರಾದಿಂದ ಉರುಳು ಸೇವೆ ಆರಂಭವಾದ ಬಳಿಕ ಸುಮಾರು ಒಂದು ಗಂಟೆಯಲ್ಲಿ ದೇವಸ್ಥಾನವನ್ನು ತಲಪುವ ಇವರು ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ ಈ ಸೇವೆ ಮಾಡುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago