ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಎರಡು ದಿನಗಳಿಂದ ವಿಪರೀತ ಜನಸಂದಣಿ ಕಂಡುಬಂದಿದೆ. ಶನಿವಾರ ರಾತ್ರಿ ವಸತಿಗೆ ರೂಮ್ ಸಿಗದೇ ಭಕ್ತಾದಿಗಳು ಪರದಾಟ ನಡೆಸಿದರು. ಭಕ್ತಾದಿಗಳು ರಸ್ತೆಯಲ್ಲಿ ಹಾಗೂ ದೇವಸ್ಥಾನದ ಹಾಲ್ ಗಳಲ್ಲಿ ಮಹಿಳೆಯರು, ಮಕ್ಕಳೊಂದಿಗೆ ವಿಶ್ರಾಂತಿ ಪಡೆದರು.
ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ವಿವಿದೆಡೆಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಎ.16 ರ ರಾತ್ರಿ ವಿಪರೀತ ಸಂದಣಿ ಉಂಟಾದ ಹಿನ್ನೆಲೆಯಲ್ಲಿ ಎಲ್ಲಾ ಕೊಠಡಿಗಳು ಭರ್ತಿಯಾದವು. ದೇವಸ್ಥಾನದ ಕಡೆಯಿಂದಲೂ ಯಾವುದೇ ವ್ಯವಸ್ಥೆ ಇರಲಿಲ್ಲ. ಹೀಗಾಗು ರಾತ್ರಿ ಉಳಿದುಕೊಳ್ಳಲು ವ್ಯವಸ್ಥೆಗಳಿಲ್ಲದೆ ಭಕ್ತರು ರಸ್ತೆಯಲ್ಲೇ ಮಲಗಿದ ಘಟನೆ ನಡೆಯಿತು. ಇದೇನು ಅಚ್ಚರಿಯಲ್ಲ, ಆದರೆ ಈಗ ಮಳೆಯ ಅಬ್ಬರವೂ ಇರುವ ಕಾರಣದಿಂದ ಮಳೆಯಾದರೆ ಭಕ್ತಾದಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ. ಹೀಗಾಗಿ ಭಕ್ತಾದಿಗಳಿಗೆ ರಾತ್ರಿ ವೇಳೆ ಇಂತಹ ಸಂದರ್ಭದಲ್ಲಿ ತಂಗಲಿ ದೇವಸ್ಥಾನದ, ಖಾಸಗಿಯವರ ಹಲವು ವಸತಿ ಗೃಹಗಳು, ದೇವಸ್ಥಾನ ಸಭಾಂಗಣಗಳು, ಹಳೆ ಪ್ರಾಥಮಿಕ ಶಾಲಾ
ಕಟ್ಟಡಗಳ ಬಳಕೆ ಮಾಡಬೇಕಾಗಿದೆ.
#ಕುಕ್ಕೆಸುಬ್ರಹ್ಮಣ್ಯ ದಲ್ಲಿ ಕೊಠಡಿ ಸಿಗದೆ ಪರದಾಟ ನಡೆಸಿದ ಭಕ್ತರು. #kukkesubrahmanya pic.twitter.com/oxYTXSHnz8
— theruralmirror (@ruralmirror) April 16, 2022
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ರಾಜ್ಯದ ನಂಬರ್ ವನ್ ದೇವಸ್ಥಾನವಾಗಿದೆ. ಇಲ್ಲಿ ಭಕ್ತಾದಿಗಳಿಗೆ ರಾತ್ರಿ ತಂಗಲು ರಸ್ತೆಯ ವ್ಯವಸ್ಥೆಯಾಗಬಾರದು, ಇದಕ್ಕಾಗಿ ಸೂಕ್ತ ವ್ಯವಸ್ಥೆ ಇಲ್ಲಿನ ಆಡಳಿತ ಹಾಗೂ ಸರ್ಕಾರ ಮಾಡಬೇಕು ಎಂದು ಗ್ರಾ. ಪಂಚಾಯತ್ ಸದಸ್ಯರಾದ ಹರೀಶ ಇಂಜಾಡಿ ಮಾಧ್ಯಮದ ಮೂಲಕ ಮನವಿ ಮಾಡಿದರು.
ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಹೆಚ್ಚಿನ ಅನುಕೂಲ ಭಕ್ತಾದಿಗಳಿಗೆ ಸಿಗಲಿ – ಹರೀಶ್ ಇಂಜಾಡಿ pic.twitter.com/pujEJPHyY2
— theruralmirror (@ruralmirror) April 16, 2022
ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಪರೀತ ರಶ್. ಕೊಠಡಿಗಳು ಸಿಗದೆ ಪರದಾಡಿದ ಭಕ್ತಾದಿಗಳು. #ಕುಕ್ಕೆಸುಬ್ರಹ್ಮಣ್ಯ #kukkesubrahmanya @ShashikalaJolle pic.twitter.com/0QpYevFmAx
— theruralmirror (@ruralmirror) April 16, 2022