ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಎರಡು ದಿನಗಳಿಂದ ವಿಪರೀತ ಜನಸಂದಣಿ ಕಂಡುಬಂದಿದೆ. ಶನಿವಾರ ರಾತ್ರಿ ವಸತಿಗೆ ರೂಮ್ ಸಿಗದೇ ಭಕ್ತಾದಿಗಳು ಪರದಾಟ ನಡೆಸಿದರು. ಭಕ್ತಾದಿಗಳು ರಸ್ತೆಯಲ್ಲಿ ಹಾಗೂ ದೇವಸ್ಥಾನದ ಹಾಲ್ ಗಳಲ್ಲಿ ಮಹಿಳೆಯರು, ಮಕ್ಕಳೊಂದಿಗೆ ವಿಶ್ರಾಂತಿ ಪಡೆದರು.
ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ವಿವಿದೆಡೆಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಎ.16 ರ ರಾತ್ರಿ ವಿಪರೀತ ಸಂದಣಿ ಉಂಟಾದ ಹಿನ್ನೆಲೆಯಲ್ಲಿ ಎಲ್ಲಾ ಕೊಠಡಿಗಳು ಭರ್ತಿಯಾದವು. ದೇವಸ್ಥಾನದ ಕಡೆಯಿಂದಲೂ ಯಾವುದೇ ವ್ಯವಸ್ಥೆ ಇರಲಿಲ್ಲ. ಹೀಗಾಗು ರಾತ್ರಿ ಉಳಿದುಕೊಳ್ಳಲು ವ್ಯವಸ್ಥೆಗಳಿಲ್ಲದೆ ಭಕ್ತರು ರಸ್ತೆಯಲ್ಲೇ ಮಲಗಿದ ಘಟನೆ ನಡೆಯಿತು. ಇದೇನು ಅಚ್ಚರಿಯಲ್ಲ, ಆದರೆ ಈಗ ಮಳೆಯ ಅಬ್ಬರವೂ ಇರುವ ಕಾರಣದಿಂದ ಮಳೆಯಾದರೆ ಭಕ್ತಾದಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ. ಹೀಗಾಗಿ ಭಕ್ತಾದಿಗಳಿಗೆ ರಾತ್ರಿ ವೇಳೆ ಇಂತಹ ಸಂದರ್ಭದಲ್ಲಿ ತಂಗಲಿ ದೇವಸ್ಥಾನದ, ಖಾಸಗಿಯವರ ಹಲವು ವಸತಿ ಗೃಹಗಳು, ದೇವಸ್ಥಾನ ಸಭಾಂಗಣಗಳು, ಹಳೆ ಪ್ರಾಥಮಿಕ ಶಾಲಾ
ಕಟ್ಟಡಗಳ ಬಳಕೆ ಮಾಡಬೇಕಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ರಾಜ್ಯದ ನಂಬರ್ ವನ್ ದೇವಸ್ಥಾನವಾಗಿದೆ. ಇಲ್ಲಿ ಭಕ್ತಾದಿಗಳಿಗೆ ರಾತ್ರಿ ತಂಗಲು ರಸ್ತೆಯ ವ್ಯವಸ್ಥೆಯಾಗಬಾರದು, ಇದಕ್ಕಾಗಿ ಸೂಕ್ತ ವ್ಯವಸ್ಥೆ ಇಲ್ಲಿನ ಆಡಳಿತ ಹಾಗೂ ಸರ್ಕಾರ ಮಾಡಬೇಕು ಎಂದು ಗ್ರಾ. ಪಂಚಾಯತ್ ಸದಸ್ಯರಾದ ಹರೀಶ ಇಂಜಾಡಿ ಮಾಧ್ಯಮದ ಮೂಲಕ ಮನವಿ ಮಾಡಿದರು.
2047ರ ವೇಳೆಗೆ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ…
ತುಂಗ-ಭದ್ರಾ ಎರಡೂ ಜಲಾಶಯಗಳಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ೮೦ ಸಾವಿರಕ್ಕೂ ಅಧಿಕ ಕ್ಯೂಸೆಕ್…
ಇತ್ತೀಚಿನ ವಿಜ್ಞಾನ ಮತ್ತು ಹೊಸ ವಿಧಾನಗಳನ್ನು ಬಳಸಿಕೊಂಡು ಜಾಗತಿಕವಾಗಿ ವೇಗವಾಗಿ ಬೆಳೆಯುವ ಮರಗವನ್ನು…
ತನ್ನಲ್ಲಿರುವುದನ್ನು ಸಮ್ಮನಸ್ಸಿನಿಂದ ನೀಡುವುದು ದಾನ. ಪಡಕೊಂಡವನ ತೃಪ್ತಿಯು ದಾನಿಗೆ ಹಾರೈಕೆ. ಇಲ್ಲಿ ಪ್ರಚಾರದ…
ಚಂದನ್ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…
ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ವ್ರತ ಆಷಾಢ…