ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಎರಡು ದಿನಗಳಿಂದ ವಿಪರೀತ ಜನಸಂದಣಿ ಕಂಡುಬಂದಿದೆ. ಶನಿವಾರ ರಾತ್ರಿ ವಸತಿಗೆ ರೂಮ್ ಸಿಗದೇ ಭಕ್ತಾದಿಗಳು ಪರದಾಟ ನಡೆಸಿದರು. ಭಕ್ತಾದಿಗಳು ರಸ್ತೆಯಲ್ಲಿ ಹಾಗೂ ದೇವಸ್ಥಾನದ ಹಾಲ್ ಗಳಲ್ಲಿ ಮಹಿಳೆಯರು, ಮಕ್ಕಳೊಂದಿಗೆ ವಿಶ್ರಾಂತಿ ಪಡೆದರು.
ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ವಿವಿದೆಡೆಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಎ.16 ರ ರಾತ್ರಿ ವಿಪರೀತ ಸಂದಣಿ ಉಂಟಾದ ಹಿನ್ನೆಲೆಯಲ್ಲಿ ಎಲ್ಲಾ ಕೊಠಡಿಗಳು ಭರ್ತಿಯಾದವು. ದೇವಸ್ಥಾನದ ಕಡೆಯಿಂದಲೂ ಯಾವುದೇ ವ್ಯವಸ್ಥೆ ಇರಲಿಲ್ಲ. ಹೀಗಾಗು ರಾತ್ರಿ ಉಳಿದುಕೊಳ್ಳಲು ವ್ಯವಸ್ಥೆಗಳಿಲ್ಲದೆ ಭಕ್ತರು ರಸ್ತೆಯಲ್ಲೇ ಮಲಗಿದ ಘಟನೆ ನಡೆಯಿತು. ಇದೇನು ಅಚ್ಚರಿಯಲ್ಲ, ಆದರೆ ಈಗ ಮಳೆಯ ಅಬ್ಬರವೂ ಇರುವ ಕಾರಣದಿಂದ ಮಳೆಯಾದರೆ ಭಕ್ತಾದಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ. ಹೀಗಾಗಿ ಭಕ್ತಾದಿಗಳಿಗೆ ರಾತ್ರಿ ವೇಳೆ ಇಂತಹ ಸಂದರ್ಭದಲ್ಲಿ ತಂಗಲಿ ದೇವಸ್ಥಾನದ, ಖಾಸಗಿಯವರ ಹಲವು ವಸತಿ ಗೃಹಗಳು, ದೇವಸ್ಥಾನ ಸಭಾಂಗಣಗಳು, ಹಳೆ ಪ್ರಾಥಮಿಕ ಶಾಲಾ
ಕಟ್ಟಡಗಳ ಬಳಕೆ ಮಾಡಬೇಕಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ರಾಜ್ಯದ ನಂಬರ್ ವನ್ ದೇವಸ್ಥಾನವಾಗಿದೆ. ಇಲ್ಲಿ ಭಕ್ತಾದಿಗಳಿಗೆ ರಾತ್ರಿ ತಂಗಲು ರಸ್ತೆಯ ವ್ಯವಸ್ಥೆಯಾಗಬಾರದು, ಇದಕ್ಕಾಗಿ ಸೂಕ್ತ ವ್ಯವಸ್ಥೆ ಇಲ್ಲಿನ ಆಡಳಿತ ಹಾಗೂ ಸರ್ಕಾರ ಮಾಡಬೇಕು ಎಂದು ಗ್ರಾ. ಪಂಚಾಯತ್ ಸದಸ್ಯರಾದ ಹರೀಶ ಇಂಜಾಡಿ ಮಾಧ್ಯಮದ ಮೂಲಕ ಮನವಿ ಮಾಡಿದರು.
ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ…
ಮಳೆಯ ಕಾರಣದಿಂದ ಅಡಿಕೆಗೆ ಬಾಧಿಸಿದ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ…
ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ…
ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ…