Advertisement
ರಾಜ್ಯ

ಸುಬ್ರಹ್ಮಣ್ಯದಲ್ಲಿ ಭಕ್ತಸಾಗರ | ವಸತಿಗೆ ಕೊಠಡಿ ಸಿಗದೆ ಪರದಾಡಿದ ಭಕ್ತರು |

Share

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಎರಡು ದಿನಗಳಿಂದ ವಿಪರೀತ ಜನಸಂದಣಿ ಕಂಡುಬಂದಿದೆ. ಶನಿವಾರ ರಾತ್ರಿ ವಸತಿಗೆ ರೂಮ್ ಸಿಗದೇ ಭಕ್ತಾದಿಗಳು ಪರದಾಟ ನಡೆಸಿದರು. ಭಕ್ತಾದಿಗಳು  ರಸ್ತೆಯಲ್ಲಿ ಹಾಗೂ ದೇವಸ್ಥಾನದ ಹಾಲ್ ಗಳಲ್ಲಿ ಮಹಿಳೆಯರು, ಮಕ್ಕಳೊಂದಿಗೆ ವಿಶ್ರಾಂತಿ ಪಡೆದರು.

Advertisement
Advertisement

ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ವಿವಿದೆಡೆಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ  ಭಕ್ತಾದಿಗಳು ಆಗಮಿಸುತ್ತಿದ್ದಾರೆ.  ಎ.16 ರ ರಾತ್ರಿ ವಿಪರೀತ ಸಂದಣಿ ಉಂಟಾದ ಹಿನ್ನೆಲೆಯಲ್ಲಿ ಎಲ್ಲಾ ಕೊಠಡಿಗಳು ಭರ್ತಿಯಾದವು. ದೇವಸ್ಥಾನದ ಕಡೆಯಿಂದಲೂ ಯಾವುದೇ ವ್ಯವಸ್ಥೆ ಇರಲಿಲ್ಲ.  ಹೀಗಾಗು ರಾತ್ರಿ ಉಳಿದುಕೊಳ್ಳಲು ವ್ಯವಸ್ಥೆಗಳಿಲ್ಲದೆ ಭಕ್ತರು ರಸ್ತೆಯಲ್ಲೇ ಮಲಗಿದ ಘಟನೆ ನಡೆಯಿತು. ಇದೇನು ಅಚ್ಚರಿಯಲ್ಲ, ಆದರೆ ಈಗ ಮಳೆಯ ಅಬ್ಬರವೂ ಇರುವ ಕಾರಣದಿಂದ ಮಳೆಯಾದರೆ ಭಕ್ತಾದಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ.  ಹೀಗಾಗಿ ಭಕ್ತಾದಿಗಳಿಗೆ ರಾತ್ರಿ ವೇಳೆ ಇಂತಹ ಸಂದರ್ಭದಲ್ಲಿ ತಂಗಲಿ ದೇವಸ್ಥಾನದ, ಖಾಸಗಿಯವರ ಹಲವು ವಸತಿ ಗೃಹಗಳು, ದೇವಸ್ಥಾನ ಸಭಾಂಗಣಗಳು, ಹಳೆ ಪ್ರಾಥಮಿಕ ಶಾಲಾ
ಕಟ್ಟಡಗಳ ಬಳಕೆ ಮಾಡಬೇಕಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ರಾಜ್ಯದ ನಂಬರ್‌ ವನ್‌ ದೇವಸ್ಥಾನವಾಗಿದೆ. ಇಲ್ಲಿ ಭಕ್ತಾದಿಗಳಿಗೆ ರಾತ್ರಿ ತಂಗಲು ರಸ್ತೆಯ ವ್ಯವಸ್ಥೆಯಾಗಬಾರದು, ಇದಕ್ಕಾಗಿ ಸೂಕ್ತ ವ್ಯವಸ್ಥೆ ಇಲ್ಲಿನ ಆಡಳಿತ ಹಾಗೂ ಸರ್ಕಾರ ಮಾಡಬೇಕು ಎಂದು ಗ್ರಾ. ಪಂಚಾಯತ್ ಸದಸ್ಯರಾದ ಹರೀಶ ಇಂಜಾಡಿ ಮಾಧ್ಯಮದ ಮೂಲಕ ಮನವಿ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

9 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

9 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

9 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

9 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

9 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

19 hours ago