ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಮಲಗಿದ ಭಕ್ತಾದಿಗಳು…! | ರಾಜ್ಯದ ನಂಬರ್‌ ವನ್‌ ದೇವಸ್ಥಾನದಲ್ಲಿ ಈ ಅವ್ಯವಸ್ಥೆಯೇ ? | ಮುಜರಾಯಿ ಇಲಾಖೆ ಮೌನ ಏಕೆ ? |

May 3, 2022
11:24 AM

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತಾದಿಗಳು ರಥಬೀದಿಯಲ್ಲಿ, ರಸ್ತೆಯ ಫುಟ್‌ ಪಾತ್‌ ನಲ್ಲಿ ಮಲಗಿದರು. ಇಂತಹದ್ದೊಂದು ವಿಷಾದ ಸಂಗತಿ ಸೋಮವಾರ ರಾತ್ರಿ ನಡೆದಿದೆ. ರಾಜ್ಯದ ನಂಬರ್‌ ವನ್‌ ದೇವಸ್ಥಾನದಲ್ಲಿನ ಈ ವ್ಯವಸ್ಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಸರ್ಕಾರ, ಮುಜರಾಯಿ ಇಲಾಖೆ ಈ ಬಗ್ಗೆ ಗಂಭೀರವಾಗಿ ಈ ಬಗ್ಗೆ ಗಮನಿಸಬೇಕಾಗಿದೆ. ಎರಡು ವಾರದ ಹಿಂದೆಯೂ ಇಂತಹದೇ ಸ್ಥಿತಿ ನಿರ್ಮಾಣವಾಗಿತ್ತು.

Advertisement
Advertisement

ರಾಜ್ಯದ ನಂಬರ್‌ ವನ್‌ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ. ಕಳೆದ ಎರಡು ವಾರಗಳಿಂದ ಭಕ್ತಾದಿಗಳು ಅವ್ಯವಸ್ಥೆಯನ್ನು ಅನುಭವಿಸುವಂತಾಗಿದೆ. ಕಳೆದ ವಾರ ಭಕ್ತರ ಸಂದಣಿ ಹೆಚ್ಚಾದ ಹಿನ್ನೆಲೆಯಲ್ಲಿ ವಸತಿಗೆ ವ್ಯವಸ್ಥೆ ಇಲ್ಲದೆ ರಸ್ತೆ ಬದಿ, ರಥಬೀದಿಯಲ್ಲಿ ಭಕ್ತಾದಿಗಳು ಮಲಗಿದ್ದು, ಇದೀಗ ಸೋಮವಾರ ರಾತ್ರಿಯೂ ಅಂತಹದೇ ಸ್ಥಿತಿ ಕಂಡುಬಂದಿದೆ. ವಸತಿಗೆ ವ್ಯವಸ್ಥೆ ಇಲ್ಲದೆ ಭಕ್ತಾದಿಗಳು ರಥಬೀದಿಯಲ್ಲಿ  ಹಾಗೂ ರಸ್ತೆ ಬದಿ ಮಲಗಿದರು. ಈ ಬಾರಿ ದೇವಸ್ಥಾನದ ವತಿಯಿಂದ ವಸತಿಗೆ ಡೈನಿಂಗ್‌ ಹಾಲ್‌ ಹಾಗೂ ಇತರ ಕಡೆ ವ್ಯವಸ್ಥೆ ಮಾಡಿದ್ದರೂ ಭಕ್ತರ ಸಂದಣಿ ಹೆಚ್ಚಾದ್ದರಿಂದ ಅನೇಕ ಭಕ್ತರು ಕೊಠಡಿ ಸಿಗದೆ ಪರದಾಟ ನಡೆಸಿದರು. ಈಗ ಕೊಠಡಿಗಿಂತಲೂ ಶೌಚಾಲಯದ ವ್ಯವಸ್ಥೆಗೆ ಸಂಕಷ್ಟವಾಗಿದೆ. ಸ್ನಾನಕ್ಕೆ ಕುಮಾರಧಾರಾ ನದಿಗೆ ತೆರಳಿದರೂ ಮಹಿಳೆಯರಿಗೆ ಶೌಚಾಲಯದ ವ್ಯವಸ್ಥೆಗೆ ಪರದಾಟವಾಗಿದೆ. ಅಭಿವೃದ್ಧಿಯ ಪಥದಲ್ಲಿ ಕುಕ್ಕೆಯು ಸಾಗುತ್ತಿದ್ದರೂ ಒಮ್ಮೆಲೇ ಭಕ್ತರ ಸಂಖ್ಯೆ ಅಧಿಕವಾದರೂ ತಕ್ಷಣ ವ್ಯವಸ್ಥೆಗೆ ರಾಜ್ಯದ ನಂಬರ್‌ ವನ್‌ ದೇವಸ್ಥಾನದ ಆಡಳಿತಕ್ಕೆ , ಅಧಿಕಾರಿಗಳಿಗೆ ಏಕೆ ಸಾಧ್ಯವಿಲ್ಲ ಎನ್ನುವುದು ಭಕ್ತರ ಪ್ರಶ್ನೆಯಾಗಿದೆ. ವಸತಿಗೆ ತಕ್ಷಣವೇ ಶಾಮಿಯಾನದ ವ್ಯವಸ್ಥೆ ಮೂಲಕ ತಾತ್ಕಾಲಿಕ ವ್ಯವಸ್ಥೆ ಕಷ್ಟವೇ ? ಎಂಬುದೂ ಭಕ್ತರ ಪ್ರಶ್ನೆ.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group