ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಮಲಗಿದ ಭಕ್ತಾದಿಗಳು…! | ರಾಜ್ಯದ ನಂಬರ್‌ ವನ್‌ ದೇವಸ್ಥಾನದಲ್ಲಿ ಈ ಅವ್ಯವಸ್ಥೆಯೇ ? | ಮುಜರಾಯಿ ಇಲಾಖೆ ಮೌನ ಏಕೆ ? |

May 3, 2022
11:24 AM

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತಾದಿಗಳು ರಥಬೀದಿಯಲ್ಲಿ, ರಸ್ತೆಯ ಫುಟ್‌ ಪಾತ್‌ ನಲ್ಲಿ ಮಲಗಿದರು. ಇಂತಹದ್ದೊಂದು ವಿಷಾದ ಸಂಗತಿ ಸೋಮವಾರ ರಾತ್ರಿ ನಡೆದಿದೆ. ರಾಜ್ಯದ ನಂಬರ್‌ ವನ್‌ ದೇವಸ್ಥಾನದಲ್ಲಿನ ಈ ವ್ಯವಸ್ಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಸರ್ಕಾರ, ಮುಜರಾಯಿ ಇಲಾಖೆ ಈ ಬಗ್ಗೆ ಗಂಭೀರವಾಗಿ ಈ ಬಗ್ಗೆ ಗಮನಿಸಬೇಕಾಗಿದೆ. ಎರಡು ವಾರದ ಹಿಂದೆಯೂ ಇಂತಹದೇ ಸ್ಥಿತಿ ನಿರ್ಮಾಣವಾಗಿತ್ತು.

ರಾಜ್ಯದ ನಂಬರ್‌ ವನ್‌ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ. ಕಳೆದ ಎರಡು ವಾರಗಳಿಂದ ಭಕ್ತಾದಿಗಳು ಅವ್ಯವಸ್ಥೆಯನ್ನು ಅನುಭವಿಸುವಂತಾಗಿದೆ. ಕಳೆದ ವಾರ ಭಕ್ತರ ಸಂದಣಿ ಹೆಚ್ಚಾದ ಹಿನ್ನೆಲೆಯಲ್ಲಿ ವಸತಿಗೆ ವ್ಯವಸ್ಥೆ ಇಲ್ಲದೆ ರಸ್ತೆ ಬದಿ, ರಥಬೀದಿಯಲ್ಲಿ ಭಕ್ತಾದಿಗಳು ಮಲಗಿದ್ದು, ಇದೀಗ ಸೋಮವಾರ ರಾತ್ರಿಯೂ ಅಂತಹದೇ ಸ್ಥಿತಿ ಕಂಡುಬಂದಿದೆ. ವಸತಿಗೆ ವ್ಯವಸ್ಥೆ ಇಲ್ಲದೆ ಭಕ್ತಾದಿಗಳು ರಥಬೀದಿಯಲ್ಲಿ  ಹಾಗೂ ರಸ್ತೆ ಬದಿ ಮಲಗಿದರು. ಈ ಬಾರಿ ದೇವಸ್ಥಾನದ ವತಿಯಿಂದ ವಸತಿಗೆ ಡೈನಿಂಗ್‌ ಹಾಲ್‌ ಹಾಗೂ ಇತರ ಕಡೆ ವ್ಯವಸ್ಥೆ ಮಾಡಿದ್ದರೂ ಭಕ್ತರ ಸಂದಣಿ ಹೆಚ್ಚಾದ್ದರಿಂದ ಅನೇಕ ಭಕ್ತರು ಕೊಠಡಿ ಸಿಗದೆ ಪರದಾಟ ನಡೆಸಿದರು. ಈಗ ಕೊಠಡಿಗಿಂತಲೂ ಶೌಚಾಲಯದ ವ್ಯವಸ್ಥೆಗೆ ಸಂಕಷ್ಟವಾಗಿದೆ. ಸ್ನಾನಕ್ಕೆ ಕುಮಾರಧಾರಾ ನದಿಗೆ ತೆರಳಿದರೂ ಮಹಿಳೆಯರಿಗೆ ಶೌಚಾಲಯದ ವ್ಯವಸ್ಥೆಗೆ ಪರದಾಟವಾಗಿದೆ. ಅಭಿವೃದ್ಧಿಯ ಪಥದಲ್ಲಿ ಕುಕ್ಕೆಯು ಸಾಗುತ್ತಿದ್ದರೂ ಒಮ್ಮೆಲೇ ಭಕ್ತರ ಸಂಖ್ಯೆ ಅಧಿಕವಾದರೂ ತಕ್ಷಣ ವ್ಯವಸ್ಥೆಗೆ ರಾಜ್ಯದ ನಂಬರ್‌ ವನ್‌ ದೇವಸ್ಥಾನದ ಆಡಳಿತಕ್ಕೆ , ಅಧಿಕಾರಿಗಳಿಗೆ ಏಕೆ ಸಾಧ್ಯವಿಲ್ಲ ಎನ್ನುವುದು ಭಕ್ತರ ಪ್ರಶ್ನೆಯಾಗಿದೆ. ವಸತಿಗೆ ತಕ್ಷಣವೇ ಶಾಮಿಯಾನದ ವ್ಯವಸ್ಥೆ ಮೂಲಕ ತಾತ್ಕಾಲಿಕ ವ್ಯವಸ್ಥೆ ಕಷ್ಟವೇ ? ಎಂಬುದೂ ಭಕ್ತರ ಪ್ರಶ್ನೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror