ವೈರಲ್ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಮಲಗಿದ ಭಕ್ತಾದಿಗಳು…! | ರಾಜ್ಯದ ನಂಬರ್‌ ವನ್‌ ದೇವಸ್ಥಾನದಲ್ಲಿ ಈ ಅವ್ಯವಸ್ಥೆಯೇ ? | ಮುಜರಾಯಿ ಇಲಾಖೆ ಮೌನ ಏಕೆ ? |

Share

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತಾದಿಗಳು ರಥಬೀದಿಯಲ್ಲಿ, ರಸ್ತೆಯ ಫುಟ್‌ ಪಾತ್‌ ನಲ್ಲಿ ಮಲಗಿದರು. ಇಂತಹದ್ದೊಂದು ವಿಷಾದ ಸಂಗತಿ ಸೋಮವಾರ ರಾತ್ರಿ ನಡೆದಿದೆ. ರಾಜ್ಯದ ನಂಬರ್‌ ವನ್‌ ದೇವಸ್ಥಾನದಲ್ಲಿನ ಈ ವ್ಯವಸ್ಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಸರ್ಕಾರ, ಮುಜರಾಯಿ ಇಲಾಖೆ ಈ ಬಗ್ಗೆ ಗಂಭೀರವಾಗಿ ಈ ಬಗ್ಗೆ ಗಮನಿಸಬೇಕಾಗಿದೆ. ಎರಡು ವಾರದ ಹಿಂದೆಯೂ ಇಂತಹದೇ ಸ್ಥಿತಿ ನಿರ್ಮಾಣವಾಗಿತ್ತು.

ರಾಜ್ಯದ ನಂಬರ್‌ ವನ್‌ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ. ಕಳೆದ ಎರಡು ವಾರಗಳಿಂದ ಭಕ್ತಾದಿಗಳು ಅವ್ಯವಸ್ಥೆಯನ್ನು ಅನುಭವಿಸುವಂತಾಗಿದೆ. ಕಳೆದ ವಾರ ಭಕ್ತರ ಸಂದಣಿ ಹೆಚ್ಚಾದ ಹಿನ್ನೆಲೆಯಲ್ಲಿ ವಸತಿಗೆ ವ್ಯವಸ್ಥೆ ಇಲ್ಲದೆ ರಸ್ತೆ ಬದಿ, ರಥಬೀದಿಯಲ್ಲಿ ಭಕ್ತಾದಿಗಳು ಮಲಗಿದ್ದು, ಇದೀಗ ಸೋಮವಾರ ರಾತ್ರಿಯೂ ಅಂತಹದೇ ಸ್ಥಿತಿ ಕಂಡುಬಂದಿದೆ. ವಸತಿಗೆ ವ್ಯವಸ್ಥೆ ಇಲ್ಲದೆ ಭಕ್ತಾದಿಗಳು ರಥಬೀದಿಯಲ್ಲಿ  ಹಾಗೂ ರಸ್ತೆ ಬದಿ ಮಲಗಿದರು. ಈ ಬಾರಿ ದೇವಸ್ಥಾನದ ವತಿಯಿಂದ ವಸತಿಗೆ ಡೈನಿಂಗ್‌ ಹಾಲ್‌ ಹಾಗೂ ಇತರ ಕಡೆ ವ್ಯವಸ್ಥೆ ಮಾಡಿದ್ದರೂ ಭಕ್ತರ ಸಂದಣಿ ಹೆಚ್ಚಾದ್ದರಿಂದ ಅನೇಕ ಭಕ್ತರು ಕೊಠಡಿ ಸಿಗದೆ ಪರದಾಟ ನಡೆಸಿದರು. ಈಗ ಕೊಠಡಿಗಿಂತಲೂ ಶೌಚಾಲಯದ ವ್ಯವಸ್ಥೆಗೆ ಸಂಕಷ್ಟವಾಗಿದೆ. ಸ್ನಾನಕ್ಕೆ ಕುಮಾರಧಾರಾ ನದಿಗೆ ತೆರಳಿದರೂ ಮಹಿಳೆಯರಿಗೆ ಶೌಚಾಲಯದ ವ್ಯವಸ್ಥೆಗೆ ಪರದಾಟವಾಗಿದೆ. ಅಭಿವೃದ್ಧಿಯ ಪಥದಲ್ಲಿ ಕುಕ್ಕೆಯು ಸಾಗುತ್ತಿದ್ದರೂ ಒಮ್ಮೆಲೇ ಭಕ್ತರ ಸಂಖ್ಯೆ ಅಧಿಕವಾದರೂ ತಕ್ಷಣ ವ್ಯವಸ್ಥೆಗೆ ರಾಜ್ಯದ ನಂಬರ್‌ ವನ್‌ ದೇವಸ್ಥಾನದ ಆಡಳಿತಕ್ಕೆ , ಅಧಿಕಾರಿಗಳಿಗೆ ಏಕೆ ಸಾಧ್ಯವಿಲ್ಲ ಎನ್ನುವುದು ಭಕ್ತರ ಪ್ರಶ್ನೆಯಾಗಿದೆ. ವಸತಿಗೆ ತಕ್ಷಣವೇ ಶಾಮಿಯಾನದ ವ್ಯವಸ್ಥೆ ಮೂಲಕ ತಾತ್ಕಾಲಿಕ ವ್ಯವಸ್ಥೆ ಕಷ್ಟವೇ ? ಎಂಬುದೂ ಭಕ್ತರ ಪ್ರಶ್ನೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |

ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…

8 hours ago

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…

11 hours ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…

12 hours ago

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…

12 hours ago

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…

12 hours ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…

12 hours ago