Advertisement
ವೈರಲ್ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಮಲಗಿದ ಭಕ್ತಾದಿಗಳು…! | ರಾಜ್ಯದ ನಂಬರ್‌ ವನ್‌ ದೇವಸ್ಥಾನದಲ್ಲಿ ಈ ಅವ್ಯವಸ್ಥೆಯೇ ? | ಮುಜರಾಯಿ ಇಲಾಖೆ ಮೌನ ಏಕೆ ? |

Share

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತಾದಿಗಳು ರಥಬೀದಿಯಲ್ಲಿ, ರಸ್ತೆಯ ಫುಟ್‌ ಪಾತ್‌ ನಲ್ಲಿ ಮಲಗಿದರು. ಇಂತಹದ್ದೊಂದು ವಿಷಾದ ಸಂಗತಿ ಸೋಮವಾರ ರಾತ್ರಿ ನಡೆದಿದೆ. ರಾಜ್ಯದ ನಂಬರ್‌ ವನ್‌ ದೇವಸ್ಥಾನದಲ್ಲಿನ ಈ ವ್ಯವಸ್ಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಸರ್ಕಾರ, ಮುಜರಾಯಿ ಇಲಾಖೆ ಈ ಬಗ್ಗೆ ಗಂಭೀರವಾಗಿ ಈ ಬಗ್ಗೆ ಗಮನಿಸಬೇಕಾಗಿದೆ. ಎರಡು ವಾರದ ಹಿಂದೆಯೂ ಇಂತಹದೇ ಸ್ಥಿತಿ ನಿರ್ಮಾಣವಾಗಿತ್ತು.

Advertisement
Advertisement

Advertisement

ರಾಜ್ಯದ ನಂಬರ್‌ ವನ್‌ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ. ಕಳೆದ ಎರಡು ವಾರಗಳಿಂದ ಭಕ್ತಾದಿಗಳು ಅವ್ಯವಸ್ಥೆಯನ್ನು ಅನುಭವಿಸುವಂತಾಗಿದೆ. ಕಳೆದ ವಾರ ಭಕ್ತರ ಸಂದಣಿ ಹೆಚ್ಚಾದ ಹಿನ್ನೆಲೆಯಲ್ಲಿ ವಸತಿಗೆ ವ್ಯವಸ್ಥೆ ಇಲ್ಲದೆ ರಸ್ತೆ ಬದಿ, ರಥಬೀದಿಯಲ್ಲಿ ಭಕ್ತಾದಿಗಳು ಮಲಗಿದ್ದು, ಇದೀಗ ಸೋಮವಾರ ರಾತ್ರಿಯೂ ಅಂತಹದೇ ಸ್ಥಿತಿ ಕಂಡುಬಂದಿದೆ. ವಸತಿಗೆ ವ್ಯವಸ್ಥೆ ಇಲ್ಲದೆ ಭಕ್ತಾದಿಗಳು ರಥಬೀದಿಯಲ್ಲಿ  ಹಾಗೂ ರಸ್ತೆ ಬದಿ ಮಲಗಿದರು. ಈ ಬಾರಿ ದೇವಸ್ಥಾನದ ವತಿಯಿಂದ ವಸತಿಗೆ ಡೈನಿಂಗ್‌ ಹಾಲ್‌ ಹಾಗೂ ಇತರ ಕಡೆ ವ್ಯವಸ್ಥೆ ಮಾಡಿದ್ದರೂ ಭಕ್ತರ ಸಂದಣಿ ಹೆಚ್ಚಾದ್ದರಿಂದ ಅನೇಕ ಭಕ್ತರು ಕೊಠಡಿ ಸಿಗದೆ ಪರದಾಟ ನಡೆಸಿದರು. ಈಗ ಕೊಠಡಿಗಿಂತಲೂ ಶೌಚಾಲಯದ ವ್ಯವಸ್ಥೆಗೆ ಸಂಕಷ್ಟವಾಗಿದೆ. ಸ್ನಾನಕ್ಕೆ ಕುಮಾರಧಾರಾ ನದಿಗೆ ತೆರಳಿದರೂ ಮಹಿಳೆಯರಿಗೆ ಶೌಚಾಲಯದ ವ್ಯವಸ್ಥೆಗೆ ಪರದಾಟವಾಗಿದೆ. ಅಭಿವೃದ್ಧಿಯ ಪಥದಲ್ಲಿ ಕುಕ್ಕೆಯು ಸಾಗುತ್ತಿದ್ದರೂ ಒಮ್ಮೆಲೇ ಭಕ್ತರ ಸಂಖ್ಯೆ ಅಧಿಕವಾದರೂ ತಕ್ಷಣ ವ್ಯವಸ್ಥೆಗೆ ರಾಜ್ಯದ ನಂಬರ್‌ ವನ್‌ ದೇವಸ್ಥಾನದ ಆಡಳಿತಕ್ಕೆ , ಅಧಿಕಾರಿಗಳಿಗೆ ಏಕೆ ಸಾಧ್ಯವಿಲ್ಲ ಎನ್ನುವುದು ಭಕ್ತರ ಪ್ರಶ್ನೆಯಾಗಿದೆ. ವಸತಿಗೆ ತಕ್ಷಣವೇ ಶಾಮಿಯಾನದ ವ್ಯವಸ್ಥೆ ಮೂಲಕ ತಾತ್ಕಾಲಿಕ ವ್ಯವಸ್ಥೆ ಕಷ್ಟವೇ ? ಎಂಬುದೂ ಭಕ್ತರ ಪ್ರಶ್ನೆ.

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

5 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

6 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago