Advertisement
ವೈರಲ್ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಮಲಗಿದ ಭಕ್ತಾದಿಗಳು…! | ರಾಜ್ಯದ ನಂಬರ್‌ ವನ್‌ ದೇವಸ್ಥಾನದಲ್ಲಿ ಈ ಅವ್ಯವಸ್ಥೆಯೇ ? | ಮುಜರಾಯಿ ಇಲಾಖೆ ಮೌನ ಏಕೆ ? |

Share

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತಾದಿಗಳು ರಥಬೀದಿಯಲ್ಲಿ, ರಸ್ತೆಯ ಫುಟ್‌ ಪಾತ್‌ ನಲ್ಲಿ ಮಲಗಿದರು. ಇಂತಹದ್ದೊಂದು ವಿಷಾದ ಸಂಗತಿ ಸೋಮವಾರ ರಾತ್ರಿ ನಡೆದಿದೆ. ರಾಜ್ಯದ ನಂಬರ್‌ ವನ್‌ ದೇವಸ್ಥಾನದಲ್ಲಿನ ಈ ವ್ಯವಸ್ಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಸರ್ಕಾರ, ಮುಜರಾಯಿ ಇಲಾಖೆ ಈ ಬಗ್ಗೆ ಗಂಭೀರವಾಗಿ ಈ ಬಗ್ಗೆ ಗಮನಿಸಬೇಕಾಗಿದೆ. ಎರಡು ವಾರದ ಹಿಂದೆಯೂ ಇಂತಹದೇ ಸ್ಥಿತಿ ನಿರ್ಮಾಣವಾಗಿತ್ತು.

ರಾಜ್ಯದ ನಂಬರ್‌ ವನ್‌ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ. ಕಳೆದ ಎರಡು ವಾರಗಳಿಂದ ಭಕ್ತಾದಿಗಳು ಅವ್ಯವಸ್ಥೆಯನ್ನು ಅನುಭವಿಸುವಂತಾಗಿದೆ. ಕಳೆದ ವಾರ ಭಕ್ತರ ಸಂದಣಿ ಹೆಚ್ಚಾದ ಹಿನ್ನೆಲೆಯಲ್ಲಿ ವಸತಿಗೆ ವ್ಯವಸ್ಥೆ ಇಲ್ಲದೆ ರಸ್ತೆ ಬದಿ, ರಥಬೀದಿಯಲ್ಲಿ ಭಕ್ತಾದಿಗಳು ಮಲಗಿದ್ದು, ಇದೀಗ ಸೋಮವಾರ ರಾತ್ರಿಯೂ ಅಂತಹದೇ ಸ್ಥಿತಿ ಕಂಡುಬಂದಿದೆ. ವಸತಿಗೆ ವ್ಯವಸ್ಥೆ ಇಲ್ಲದೆ ಭಕ್ತಾದಿಗಳು ರಥಬೀದಿಯಲ್ಲಿ  ಹಾಗೂ ರಸ್ತೆ ಬದಿ ಮಲಗಿದರು. ಈ ಬಾರಿ ದೇವಸ್ಥಾನದ ವತಿಯಿಂದ ವಸತಿಗೆ ಡೈನಿಂಗ್‌ ಹಾಲ್‌ ಹಾಗೂ ಇತರ ಕಡೆ ವ್ಯವಸ್ಥೆ ಮಾಡಿದ್ದರೂ ಭಕ್ತರ ಸಂದಣಿ ಹೆಚ್ಚಾದ್ದರಿಂದ ಅನೇಕ ಭಕ್ತರು ಕೊಠಡಿ ಸಿಗದೆ ಪರದಾಟ ನಡೆಸಿದರು. ಈಗ ಕೊಠಡಿಗಿಂತಲೂ ಶೌಚಾಲಯದ ವ್ಯವಸ್ಥೆಗೆ ಸಂಕಷ್ಟವಾಗಿದೆ. ಸ್ನಾನಕ್ಕೆ ಕುಮಾರಧಾರಾ ನದಿಗೆ ತೆರಳಿದರೂ ಮಹಿಳೆಯರಿಗೆ ಶೌಚಾಲಯದ ವ್ಯವಸ್ಥೆಗೆ ಪರದಾಟವಾಗಿದೆ. ಅಭಿವೃದ್ಧಿಯ ಪಥದಲ್ಲಿ ಕುಕ್ಕೆಯು ಸಾಗುತ್ತಿದ್ದರೂ ಒಮ್ಮೆಲೇ ಭಕ್ತರ ಸಂಖ್ಯೆ ಅಧಿಕವಾದರೂ ತಕ್ಷಣ ವ್ಯವಸ್ಥೆಗೆ ರಾಜ್ಯದ ನಂಬರ್‌ ವನ್‌ ದೇವಸ್ಥಾನದ ಆಡಳಿತಕ್ಕೆ , ಅಧಿಕಾರಿಗಳಿಗೆ ಏಕೆ ಸಾಧ್ಯವಿಲ್ಲ ಎನ್ನುವುದು ಭಕ್ತರ ಪ್ರಶ್ನೆಯಾಗಿದೆ. ವಸತಿಗೆ ತಕ್ಷಣವೇ ಶಾಮಿಯಾನದ ವ್ಯವಸ್ಥೆ ಮೂಲಕ ತಾತ್ಕಾಲಿಕ ವ್ಯವಸ್ಥೆ ಕಷ್ಟವೇ ? ಎಂಬುದೂ ಭಕ್ತರ ಪ್ರಶ್ನೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

1 day ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

1 day ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

3 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

4 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

4 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

5 days ago