Advertisement
ವೈರಲ್ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಮಲಗಿದ ಭಕ್ತಾದಿಗಳು…! | ರಾಜ್ಯದ ನಂಬರ್‌ ವನ್‌ ದೇವಸ್ಥಾನದಲ್ಲಿ ಈ ಅವ್ಯವಸ್ಥೆಯೇ ? | ಮುಜರಾಯಿ ಇಲಾಖೆ ಮೌನ ಏಕೆ ? |

Share

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತಾದಿಗಳು ರಥಬೀದಿಯಲ್ಲಿ, ರಸ್ತೆಯ ಫುಟ್‌ ಪಾತ್‌ ನಲ್ಲಿ ಮಲಗಿದರು. ಇಂತಹದ್ದೊಂದು ವಿಷಾದ ಸಂಗತಿ ಸೋಮವಾರ ರಾತ್ರಿ ನಡೆದಿದೆ. ರಾಜ್ಯದ ನಂಬರ್‌ ವನ್‌ ದೇವಸ್ಥಾನದಲ್ಲಿನ ಈ ವ್ಯವಸ್ಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಸರ್ಕಾರ, ಮುಜರಾಯಿ ಇಲಾಖೆ ಈ ಬಗ್ಗೆ ಗಂಭೀರವಾಗಿ ಈ ಬಗ್ಗೆ ಗಮನಿಸಬೇಕಾಗಿದೆ. ಎರಡು ವಾರದ ಹಿಂದೆಯೂ ಇಂತಹದೇ ಸ್ಥಿತಿ ನಿರ್ಮಾಣವಾಗಿತ್ತು.

ರಾಜ್ಯದ ನಂಬರ್‌ ವನ್‌ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ. ಕಳೆದ ಎರಡು ವಾರಗಳಿಂದ ಭಕ್ತಾದಿಗಳು ಅವ್ಯವಸ್ಥೆಯನ್ನು ಅನುಭವಿಸುವಂತಾಗಿದೆ. ಕಳೆದ ವಾರ ಭಕ್ತರ ಸಂದಣಿ ಹೆಚ್ಚಾದ ಹಿನ್ನೆಲೆಯಲ್ಲಿ ವಸತಿಗೆ ವ್ಯವಸ್ಥೆ ಇಲ್ಲದೆ ರಸ್ತೆ ಬದಿ, ರಥಬೀದಿಯಲ್ಲಿ ಭಕ್ತಾದಿಗಳು ಮಲಗಿದ್ದು, ಇದೀಗ ಸೋಮವಾರ ರಾತ್ರಿಯೂ ಅಂತಹದೇ ಸ್ಥಿತಿ ಕಂಡುಬಂದಿದೆ. ವಸತಿಗೆ ವ್ಯವಸ್ಥೆ ಇಲ್ಲದೆ ಭಕ್ತಾದಿಗಳು ರಥಬೀದಿಯಲ್ಲಿ  ಹಾಗೂ ರಸ್ತೆ ಬದಿ ಮಲಗಿದರು. ಈ ಬಾರಿ ದೇವಸ್ಥಾನದ ವತಿಯಿಂದ ವಸತಿಗೆ ಡೈನಿಂಗ್‌ ಹಾಲ್‌ ಹಾಗೂ ಇತರ ಕಡೆ ವ್ಯವಸ್ಥೆ ಮಾಡಿದ್ದರೂ ಭಕ್ತರ ಸಂದಣಿ ಹೆಚ್ಚಾದ್ದರಿಂದ ಅನೇಕ ಭಕ್ತರು ಕೊಠಡಿ ಸಿಗದೆ ಪರದಾಟ ನಡೆಸಿದರು. ಈಗ ಕೊಠಡಿಗಿಂತಲೂ ಶೌಚಾಲಯದ ವ್ಯವಸ್ಥೆಗೆ ಸಂಕಷ್ಟವಾಗಿದೆ. ಸ್ನಾನಕ್ಕೆ ಕುಮಾರಧಾರಾ ನದಿಗೆ ತೆರಳಿದರೂ ಮಹಿಳೆಯರಿಗೆ ಶೌಚಾಲಯದ ವ್ಯವಸ್ಥೆಗೆ ಪರದಾಟವಾಗಿದೆ. ಅಭಿವೃದ್ಧಿಯ ಪಥದಲ್ಲಿ ಕುಕ್ಕೆಯು ಸಾಗುತ್ತಿದ್ದರೂ ಒಮ್ಮೆಲೇ ಭಕ್ತರ ಸಂಖ್ಯೆ ಅಧಿಕವಾದರೂ ತಕ್ಷಣ ವ್ಯವಸ್ಥೆಗೆ ರಾಜ್ಯದ ನಂಬರ್‌ ವನ್‌ ದೇವಸ್ಥಾನದ ಆಡಳಿತಕ್ಕೆ , ಅಧಿಕಾರಿಗಳಿಗೆ ಏಕೆ ಸಾಧ್ಯವಿಲ್ಲ ಎನ್ನುವುದು ಭಕ್ತರ ಪ್ರಶ್ನೆಯಾಗಿದೆ. ವಸತಿಗೆ ತಕ್ಷಣವೇ ಶಾಮಿಯಾನದ ವ್ಯವಸ್ಥೆ ಮೂಲಕ ತಾತ್ಕಾಲಿಕ ವ್ಯವಸ್ಥೆ ಕಷ್ಟವೇ ? ಎಂಬುದೂ ಭಕ್ತರ ಪ್ರಶ್ನೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

10 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

18 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

2 days ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago