Advertisement
ವೈರಲ್ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಮಲಗಿದ ಭಕ್ತಾದಿಗಳು…! | ರಾಜ್ಯದ ನಂಬರ್‌ ವನ್‌ ದೇವಸ್ಥಾನದಲ್ಲಿ ಈ ಅವ್ಯವಸ್ಥೆಯೇ ? | ಮುಜರಾಯಿ ಇಲಾಖೆ ಮೌನ ಏಕೆ ? |

Share

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತಾದಿಗಳು ರಥಬೀದಿಯಲ್ಲಿ, ರಸ್ತೆಯ ಫುಟ್‌ ಪಾತ್‌ ನಲ್ಲಿ ಮಲಗಿದರು. ಇಂತಹದ್ದೊಂದು ವಿಷಾದ ಸಂಗತಿ ಸೋಮವಾರ ರಾತ್ರಿ ನಡೆದಿದೆ. ರಾಜ್ಯದ ನಂಬರ್‌ ವನ್‌ ದೇವಸ್ಥಾನದಲ್ಲಿನ ಈ ವ್ಯವಸ್ಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಸರ್ಕಾರ, ಮುಜರಾಯಿ ಇಲಾಖೆ ಈ ಬಗ್ಗೆ ಗಂಭೀರವಾಗಿ ಈ ಬಗ್ಗೆ ಗಮನಿಸಬೇಕಾಗಿದೆ. ಎರಡು ವಾರದ ಹಿಂದೆಯೂ ಇಂತಹದೇ ಸ್ಥಿತಿ ನಿರ್ಮಾಣವಾಗಿತ್ತು.

ರಾಜ್ಯದ ನಂಬರ್‌ ವನ್‌ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ. ಕಳೆದ ಎರಡು ವಾರಗಳಿಂದ ಭಕ್ತಾದಿಗಳು ಅವ್ಯವಸ್ಥೆಯನ್ನು ಅನುಭವಿಸುವಂತಾಗಿದೆ. ಕಳೆದ ವಾರ ಭಕ್ತರ ಸಂದಣಿ ಹೆಚ್ಚಾದ ಹಿನ್ನೆಲೆಯಲ್ಲಿ ವಸತಿಗೆ ವ್ಯವಸ್ಥೆ ಇಲ್ಲದೆ ರಸ್ತೆ ಬದಿ, ರಥಬೀದಿಯಲ್ಲಿ ಭಕ್ತಾದಿಗಳು ಮಲಗಿದ್ದು, ಇದೀಗ ಸೋಮವಾರ ರಾತ್ರಿಯೂ ಅಂತಹದೇ ಸ್ಥಿತಿ ಕಂಡುಬಂದಿದೆ. ವಸತಿಗೆ ವ್ಯವಸ್ಥೆ ಇಲ್ಲದೆ ಭಕ್ತಾದಿಗಳು ರಥಬೀದಿಯಲ್ಲಿ  ಹಾಗೂ ರಸ್ತೆ ಬದಿ ಮಲಗಿದರು. ಈ ಬಾರಿ ದೇವಸ್ಥಾನದ ವತಿಯಿಂದ ವಸತಿಗೆ ಡೈನಿಂಗ್‌ ಹಾಲ್‌ ಹಾಗೂ ಇತರ ಕಡೆ ವ್ಯವಸ್ಥೆ ಮಾಡಿದ್ದರೂ ಭಕ್ತರ ಸಂದಣಿ ಹೆಚ್ಚಾದ್ದರಿಂದ ಅನೇಕ ಭಕ್ತರು ಕೊಠಡಿ ಸಿಗದೆ ಪರದಾಟ ನಡೆಸಿದರು. ಈಗ ಕೊಠಡಿಗಿಂತಲೂ ಶೌಚಾಲಯದ ವ್ಯವಸ್ಥೆಗೆ ಸಂಕಷ್ಟವಾಗಿದೆ. ಸ್ನಾನಕ್ಕೆ ಕುಮಾರಧಾರಾ ನದಿಗೆ ತೆರಳಿದರೂ ಮಹಿಳೆಯರಿಗೆ ಶೌಚಾಲಯದ ವ್ಯವಸ್ಥೆಗೆ ಪರದಾಟವಾಗಿದೆ. ಅಭಿವೃದ್ಧಿಯ ಪಥದಲ್ಲಿ ಕುಕ್ಕೆಯು ಸಾಗುತ್ತಿದ್ದರೂ ಒಮ್ಮೆಲೇ ಭಕ್ತರ ಸಂಖ್ಯೆ ಅಧಿಕವಾದರೂ ತಕ್ಷಣ ವ್ಯವಸ್ಥೆಗೆ ರಾಜ್ಯದ ನಂಬರ್‌ ವನ್‌ ದೇವಸ್ಥಾನದ ಆಡಳಿತಕ್ಕೆ , ಅಧಿಕಾರಿಗಳಿಗೆ ಏಕೆ ಸಾಧ್ಯವಿಲ್ಲ ಎನ್ನುವುದು ಭಕ್ತರ ಪ್ರಶ್ನೆಯಾಗಿದೆ. ವಸತಿಗೆ ತಕ್ಷಣವೇ ಶಾಮಿಯಾನದ ವ್ಯವಸ್ಥೆ ಮೂಲಕ ತಾತ್ಕಾಲಿಕ ವ್ಯವಸ್ಥೆ ಕಷ್ಟವೇ ? ಎಂಬುದೂ ಭಕ್ತರ ಪ್ರಶ್ನೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

1 hour ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

10 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

10 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago