ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಸೋಮವಾರ ರಾತ್ರಿ ರಥಬೀದಿಯಲ್ಲಿ ಭಕ್ತಾದಿಗಳು ಮಲಗಿರುವ ಬಗ್ಗೆ ದೇವಸ್ಥಾನದ ವತಿಯಿಂದ ಸ್ಪಷ್ಟನೆ ನೀಡಲಾಗಿದೆ. ಕ್ಷೇತ್ರಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳು ವಸತಿ ಇಲ್ಲದೇ ಇದ್ದಲ್ಲಿ ಆದಿಸುಬ್ರಹ್ಮಣ್ಯದ ಬಳಿಯ ಕಲ್ಯಾಣ ಮಂಟಪ ಹಾಗೂ ಷಣ್ಮುಖ ಪ್ರಸಾದ ಭೋಜನ ಶಾಲೆಯ ಮೇಲ್ಮಹಡಿಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಇದರ ಪ್ರಯೋಜನ ಪಡೆಯುವಂತೆ ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳು ಕೊಠಡಿ ವ್ಯವಸ್ಥೆ ಇರುತ್ತದೆ. ವಸತಿಗೃಹಗಳು ಭರ್ತಿಯಾದ ಬಳಿಕ ಆದಿಸುಬ್ರಹ್ಮಣ್ಯದ ಬಳಿಯ ಕಲ್ಯಾಣ ಮಂಟಪ ಹಾಗೂ ಷಣ್ಮುಖ ಪ್ರಸಾದ ಭೋಜನ ಶಾಲೆಯ ಮೇಲ್ಮಹಡಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಆದರೂ ಕೂಡಾ ತಡರಾತ್ರಿ ಆಗಮಿಸಿದ ಭಕ್ತಾದಿಗಳು ರಥಬೀದಿಯಲ್ಲಿ ಮಲಗಿರುವುದು ತಿಳಿದುಬಂದಿದೆ. ರಜಾ ದಿನ, ಸರ್ಕಾರಿ ರಜೆ ಹಾಗೂ ಅಕ್ಷಯ ತೃತೀಯವಾದ್ದರಿಂದ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಪ್ರಕಟಣೆಯಲ್ಲಿ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…
ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…
ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…
ರಾಜಧಾನಿ ಬೆಂಗಳೂರು ಸೇರಿದಂತೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು, ಬೃಹತ್ ಬೆಂಗಳೂರು…
21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490