ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ಹಾರಿದ್ದ ಬೆಂಗಳೂರು ಯುವಕ ಸ್ವಾಮಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಸತತವಾಗಿ ನಾಲ್ಕು ದಿನದ ಕಾರ್ಯಚರಣೆ ಬಳಿಕ ಬುಧವಾರ ಸಂಜೆ ಮೃತದೇಹ ಪತ್ತೆಯಾಗಿದೆ.
ಪ್ರವಾಸಿಗರಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಬೆಂಗಳೂರು ದೀಪಾಂಜಲಿ ನಗರದ ತಂಡದಲ್ಲಿದ್ದ ಯುವಕ ಸ್ವಾಮಿ ಕುಕ್ಕೆ ಸುಬ್ರಹ್ಮಣ್ಯದಿಂದ ಹಿಂತಿರುಗುವ ವೇಳೆ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ನದಿಗೆ ಹಾರಿದ್ದ. ಆ ಬಳಿಕ ನಾಪತ್ತೆಯಾಗಿದ್ದ. ಸತತ ಕಾರ್ಯಾಚರಣೆ ಬಳಿಕ ಬುಧವಾರ ಸಂಜೆ ಮೃತದೇಹವಾಗಿ ಪತ್ತೆಯಾಗಿದ್ದಾರೆ. ಸುಮಾರು 15 ಜನ ನುರಿತ ಈಜುಗಾರರು, ಸಮಾಜ ಸೇವಕ ರವಿಕಕ್ಕೆಪದವು,ಅಗ್ನಿಶಾಮಕ ದಳ,ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಕಂದಾಯ ಅಧಿಕಾರಿಗಳು, ಗ್ರಹರಕ್ಷಕ ದಳ,ಸ್ಥಳೀಯ ಜನನಾಯಕರು ಹಾಗೂ ಸ್ಥಳೀಯರು ಸೇರಿ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದರು.
ಸ್ಥಳದಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ಗ್ರಾ. ಪಂಚಾಯತ್ ಪಿಡಿಒ ಯು. ಡಿ ಶೇಖರ್, ಸುಬ್ರಹ್ಮಣ್ಯ ಗ್ರಾ. ಪಂಚಾಯತ್ ಸದಸ್ಯರು,ಅಗ್ನಿಶಾಮಕದಳದ ಸಿಬಂದಿಗಳು, ಸ್ಥಳೀಯರು ಇದ್ದರು.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…