ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ಹಾರಿದ್ದ ಬೆಂಗಳೂರು ಯುವಕ ಸ್ವಾಮಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಸತತವಾಗಿ ನಾಲ್ಕು ದಿನದ ಕಾರ್ಯಚರಣೆ ಬಳಿಕ ಬುಧವಾರ ಸಂಜೆ ಮೃತದೇಹ ಪತ್ತೆಯಾಗಿದೆ.
ಪ್ರವಾಸಿಗರಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಬೆಂಗಳೂರು ದೀಪಾಂಜಲಿ ನಗರದ ತಂಡದಲ್ಲಿದ್ದ ಯುವಕ ಸ್ವಾಮಿ ಕುಕ್ಕೆ ಸುಬ್ರಹ್ಮಣ್ಯದಿಂದ ಹಿಂತಿರುಗುವ ವೇಳೆ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ನದಿಗೆ ಹಾರಿದ್ದ. ಆ ಬಳಿಕ ನಾಪತ್ತೆಯಾಗಿದ್ದ. ಸತತ ಕಾರ್ಯಾಚರಣೆ ಬಳಿಕ ಬುಧವಾರ ಸಂಜೆ ಮೃತದೇಹವಾಗಿ ಪತ್ತೆಯಾಗಿದ್ದಾರೆ. ಸುಮಾರು 15 ಜನ ನುರಿತ ಈಜುಗಾರರು, ಸಮಾಜ ಸೇವಕ ರವಿಕಕ್ಕೆಪದವು,ಅಗ್ನಿಶಾಮಕ ದಳ,ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಕಂದಾಯ ಅಧಿಕಾರಿಗಳು, ಗ್ರಹರಕ್ಷಕ ದಳ,ಸ್ಥಳೀಯ ಜನನಾಯಕರು ಹಾಗೂ ಸ್ಥಳೀಯರು ಸೇರಿ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದರು.
ಸ್ಥಳದಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ಗ್ರಾ. ಪಂಚಾಯತ್ ಪಿಡಿಒ ಯು. ಡಿ ಶೇಖರ್, ಸುಬ್ರಹ್ಮಣ್ಯ ಗ್ರಾ. ಪಂಚಾಯತ್ ಸದಸ್ಯರು,ಅಗ್ನಿಶಾಮಕದಳದ ಸಿಬಂದಿಗಳು, ಸ್ಥಳೀಯರು ಇದ್ದರು.
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…