ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಮಹೋತ್ಸವದ ಬಳಿಕ ಬುಧವಾರ ಬೆಳಗ್ಗೆ ಕುಮಾರಧಾರಾ ನದಿಯಲ್ಲಿ ಶ್ರೀದೇವರಿಗೆ ನೌಕಾವಿಹಾರ ಹಾಗೂ ಅವಭೃತೋತ್ಸವ ನಡೆಯಿತು.
ದೇವಳದಿಂದ ಬಂಡಿ ರಥದಲ್ಲಿ ಶ್ರೀದೇವರ ಅವಭೃತೋತ್ಸವ ಸವಾರಿ ಹೊರಟು, ಬಿಲದ್ವಾರದ ಕಟ್ಟೆಯಲ್ಲಿ ಪೂಜೆ ನಡೆಸಲಾಯಿತು. ತದನಂತರ ಕುಮಾರಧಾರಾ ನದಿ ತಟದವರೆಗೆ ಸಾಗಿಬಂದು ನದಿಯಲ್ಲಿ ತಳಿರು ತೋರಣ ಮತ್ತು ಹೂವುಗಳಿಂದ ಸಿಂಗರಿಸಲ್ಪಟ್ಟ ತೆಪ್ಪದಲ್ಲಿ ನೌಕಾವಿಹಾರ ನಡೆಯಿತು. ಬಳಿಕ ಅವಭೃತೋತ್ಸವ ನಡೆಯಿತು. ಶ್ರೀ ಕ್ಷೇತ್ರದ ಆನೆ ಯಶಸ್ವಿಯು ನದಿನೀರಿನಲ್ಲಿ ಜಲಕ್ರೀಡೆಯಾಡಿ ಸಂಭ್ರಮಿಸಿತು. ನೂರಾರು ಭಕ್ತಾದಿಗಳು ಈ ಕ್ಷಣಕ್ಕೆ ಸಾಕ್ಷಿಯಾದರು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…