ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಮಹೋತ್ಸವದ ಬಳಿಕ ಬುಧವಾರ ಬೆಳಗ್ಗೆ ಕುಮಾರಧಾರಾ ನದಿಯಲ್ಲಿ ಶ್ರೀದೇವರಿಗೆ ನೌಕಾವಿಹಾರ ಹಾಗೂ ಅವಭೃತೋತ್ಸವ ನಡೆಯಿತು.
ದೇವಳದಿಂದ ಬಂಡಿ ರಥದಲ್ಲಿ ಶ್ರೀದೇವರ ಅವಭೃತೋತ್ಸವ ಸವಾರಿ ಹೊರಟು, ಬಿಲದ್ವಾರದ ಕಟ್ಟೆಯಲ್ಲಿ ಪೂಜೆ ನಡೆಸಲಾಯಿತು. ತದನಂತರ ಕುಮಾರಧಾರಾ ನದಿ ತಟದವರೆಗೆ ಸಾಗಿಬಂದು ನದಿಯಲ್ಲಿ ತಳಿರು ತೋರಣ ಮತ್ತು ಹೂವುಗಳಿಂದ ಸಿಂಗರಿಸಲ್ಪಟ್ಟ ತೆಪ್ಪದಲ್ಲಿ ನೌಕಾವಿಹಾರ ನಡೆಯಿತು. ಬಳಿಕ ಅವಭೃತೋತ್ಸವ ನಡೆಯಿತು. ಶ್ರೀ ಕ್ಷೇತ್ರದ ಆನೆ ಯಶಸ್ವಿಯು ನದಿನೀರಿನಲ್ಲಿ ಜಲಕ್ರೀಡೆಯಾಡಿ ಸಂಭ್ರಮಿಸಿತು. ನೂರಾರು ಭಕ್ತಾದಿಗಳು ಈ ಕ್ಷಣಕ್ಕೆ ಸಾಕ್ಷಿಯಾದರು.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.