ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಬೀದಿ ಮಡೆಸ್ನಾನ ನಡೆಯುತ್ತದೆ. ಈ ಸಂದರ್ಭ ರಸ್ತೆಯಲ್ಲಿನ ಮರಳು, ಕಸ ಬೀದಿ ಮಡೆಸ್ನಾನ ಮಾಡುವ ಭಕ್ತಾದಿಗಳಿಗೆ ಸಮಸ್ಯೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯವು ಕುಮಾರಧಾರದಿಂದ ಸುಬ್ರಹ್ಮಣ್ಯದ ಕಾಶಿಕಟ್ಟೆ ತನಕ ನಡೆಯಿತು.
ಸಮಾಜ ಸೇವೆಯಲ್ಲಿಯೆ ತೊಡಗಿರುವ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರವಿಕಕ್ಕೆಪದವು ಹಾಗೂ ಸ್ವಯಂಸೇವಕರೆಲ್ಲಾ ಸೇರಿ ರಸ್ತೆಯನ್ನು ನೀರು ಹಾಕಿ ಗುಡಿಸಿ ಪ್ಲಾಸ್ಟಿಕ್, ಕಸ ಕಡ್ಡಿಗಳು, ಹಾಗೂ ರಸ್ತೆಯಲ್ಲಿದ್ದಂತಹ ಚೂರುಗಳನ್ನು ತೆಗೆದು ಸ್ವಚ್ಛ ಮಾಡಲಾಯಿತು.ಇದರಿಂದ ರಸ್ತೆಯಲ್ಲಿ ಉರುಳುಸೇವೆ ಮಾಡುವ ಭಕ್ತಾದಿಗಳಿಗೂ ಉಪಯುಕ್ತವಾಗುತ್ತದೆ ಹಾಗೂ ಸ್ವಚ್ಛತೆಯು ಆಗುವುದರೊಂದಿಗೆ ದೇವರ ಸೇವೆಯು ಆಗುತ್ತದೆ ಎನ್ನುವ ಉದ್ದೇಶದಿಂದ ಈ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…