Advertisement
ಸುದ್ದಿಗಳು

ಸುಬ್ರಹ್ಮಣ್ಯ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ | ನ್ಯಾಯಾಲಯದ ಆದೇಶವಾದರೂ ಬಂಧನವಾಗದ ಕಾಲೇಜು ಉಪನ್ಯಾಸಕ | ಇಲಾಖೆಗಳೂ ಮೌನ ಏಕೆ ?

Share

ಅತ್ಯಾಚಾರ, ಲೈಂಗಿಕ ಕಿರುಕುಳದ ಬಗ್ಗೆ ಖಡಕ್‌ ನಿರ್ಧಾರ ಕೈಗೊಳ್ಳುತ್ತದೆ ಎನ್ನುವ ರಾಜ್ಯ ಸರ್ಕಾರದ ಬಳಿ ಈಗ ನ್ಯಾಯ ಎಲ್ಲಿದೆ ಎಂದು ದೌರ್ಜನ್ಯಕ್ಕೆ ಒಳಗಾದ ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿನಿ ಕೇಳುವಂತಾಗಿದೆ. ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಅದೇ ಹೊತ್ತಿಗೆ ಬಯಲಾದ ಕುಕ್ಕೆ ಸುಬ್ರಹ್ಮಣ್ಯದ ಕಾಲೇಜು ವಿದ್ಯಾರ್ಥಿನಿ ಪ್ರಕರಣದಲ್ಲಿ ನ್ಯಾಯ ಲಭ್ಯವಾಗಿಲ್ಲ. ಹೈಕೋರ್ಟ್‌ ಆದೇಶವಾದರೂ ಆರೋಪಿ ಕಾಲೇಜು ಉಪನ್ಯಾಸಕನ ಬಂಧನವಾಗಿಲ್ಲ. ಊರಲ್ಲೆಲ್ಲಾ ಓಡಾಡಿದರೂ ಪೊಲೀಸರ ಕಣ್ಣಿಗೆ ಏಕೆ ಕಾಣುತ್ತಿಲ್ಲ ಎಂದು ಸಾರ್ವಜನಿಕರು ಈಗ ಪ್ರಶ್ನಿಸುವಂತಾಗಿದೆ.ಇಲಾಖೆಗಳು ತಿಳಿದೂ ಕಣ್ಣುಮುಚ್ಚಿ ಕುಳಿತಿವೆ ಎನ್ನುವ ಆರೋಪ ಬಲವಾಗಿದೆ.

ಕಳೆದ ಸುಮಾರು 6 ತಿಂಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳದ ಹಿನ್ನೆಲೆಯಲ್ಲಿ ಅದೇ ಕಾಲೇಜಿನ ಉಪನ್ಯಾಸಕರೊರ್ವರ ವಿರುದ್ಧ ದೂರು ದಾಖಲಾಗಿತ್ತು. ಅದಾದ ಬಳಿಕ ಆರೋಪಿ ಉಪನ್ಯಾಸಕನಿಗೆ ಎರಡೇ ದಿನದಲ್ಲಿ ಜಾಮೀನಾಗಿತ್ತು. ಪ್ರಕರಣದ ಬಳಿಕ ಕಾಲೇಜು ಮುಂದೆ ಹೋರಾಟ, ಪ್ರತಿಭಟನಾ ಸಭೆಯೂ ನಡೆದಿತ್ತು. ಉಪನ್ಯಾಸಕನ ವಜಾ ಮಾಡಬೇಕು ಎಂದು ಒತ್ತಾಯ ಮಾಡಲಾಗಿತ್ತು, ವಿದ್ಯಾರ್ಥಿನಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು  ಒತ್ತಾಯ ಕೇಳಿಬಂದಿತ್ತು. ಈ ನಡುವೆ  ನ್ಯಾಯಕ್ಕಾಗಿ ಹೈಕೋರ್ಟ್‌ ಮೊರೆ ಹೋಗಿದ್ದ ವಿದ್ಯಾರ್ಥಿನಿ ಹಾಗೂ ಆಕೆಯ ಪೋಷಕರು ಉಪನ್ಯಾಸಕನ ಜಾಮೀನು ರದ್ದು ಮಾಡುವಂತೆ ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿ ಶಿಕ್ಷಕನ ಜಾಮೀನು ಅರ್ಜಿ ರದ್ದು ಮಾಡಿದ್ದರು. ಹೀಗಾಗಿ ಜ.25  ರಂದು ಬಂಧನಕ್ಕೆ ವಾರಂಟ್‌ ಜಾರಿಯಾಗಿತ್ತು. ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ಖುದ್ದಾಗಿ ಮಾಹಿತಿಯನ್ನೂ ನೀಡಲಾಗಿತ್ತು. ಆದರೆ ಇಂದಿನವರೆಗೆ ಆರೋಪಿ ಉಪನ್ಯಾಸಕನ ಬಂಧನವಾಗಿಲ್ಲ. ಇದೇಕೆ ಎಂದು ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಣ್ಣ ಸಣ್ಣ ಪ್ರಕರಣದಲ್ಲೂ ಕರ್ನಾಟಕ ಪೊಲೀಸ್‌ ಖಡಕ್‌ ಆಗಿ ವರ್ತಿಸುತ್ತದೆ ಹಾಗೂ ಬಲಿಷ್ಟವಾಗಿದೆ. ಲೈಂಗಿಕ ಕಿರುಕುಳ ಅದರಲ್ಲೂ ವಿದ್ಯಾರ್ಥಿನಿಯೊಬ್ಬಳಿಗೆ ಗುರುಸ್ಥಾನದಲ್ಲಿ ಇರುವ ಉಪನ್ಯಾಸಕನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಏಕೆ ಕರ್ನಾಟಕ ಪೊಲೀಸ್‌ ದುರ್ಬಲವಾಗಿದೆ ಎನ್ನುವುದು ಪ್ರಶ್ನೆಯಾಗಿದೆ. ಅನ್ಯಾಯಕ್ಕೊಳಗಾದ ವಿದ್ಯಾರ್ಥಿನಿ ಹಾಗೂ ಆಕೆಯ ಪೋಷಕರು ಎಷ್ಟು ಬಾರಿ ಠಾಣೆಗೆ ಅಲೆಯಬಹುದು ?

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಕಾಲೇಜಿನಲ್ಲಿ ನಡೆದ ಈ ಪ್ರಕರಣದಲ್ಲಿ ಆಡಳಿತ ಮಂಡಳಿಯೂ ಖಡಕ್‌ ನಿರ್ಧಾರ ಪ್ರಕಟಿಸಿ ಉಪನ್ಯಾಸಕನನ್ನು ವಜಾ ಮಾಡಿದೆ. ಆ ಬಳಿಕ ಯಾವುದೇ ಮುತುವರ್ಜಿ ವಹಿಸಿಲ್ಲ.ಇಲಾಖೆಗೆ ವಹಿಸಿದೆ. ಮಹಿಳಾ ಹೋರಾಟಗಾರರು, ಸಾರ್ವಜನಿಕ ಹೋರಾಟಗಾರರೂ ಈ ಪ್ರಕರಣದಲ್ಲಿ ಆಡಳಿತ ವ್ಯವಸ್ಥೆ, ಇಲಾಖೆಗಳ ನಿರ್ಲಕ್ಷ್ಯದ ಕಾರಣದಿಂದ ಮೌನ ವಹಿಸಿರುವುದು ಕಂಡುಬಂದಿದೆ. ಸಚಿವರ ತವರು ಕ್ಷೇತ್ರದಲ್ಲಿ ನಡೆದ ಈ ಪ್ರಕರಣದಲ್ಲಿ ನ್ಯಾಯಾಲಯದ ಆದೇಶ ಇದ್ದರೂ ಆರೋಪಿ ಬಂಧನವಾಗದಿರುವ ಬಗ್ಗೆ ಈಗ ಚರ್ಚೆ ಆರಂಭವಾಗಿದೆ.( ಅಂದು ನಡೆದ ಪ್ರತಿಭಟನಾ ಸಭೆಯ ವಿಡಿಯೋ ಇಲ್ಲಿದೆ….)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

2 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

3 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

3 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

8 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

11 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

15 hours ago