#KukkeSubrahmanya | ಪ್ರಸಿದ್ಧ ಪುಣ್ಯ ಕ್ಷೇತ್ರ | ಬಸ್‌ ನಿಲ್ದಾಣದ ಅವಸ್ಥೆ…! | ರಸ್ತೆ ಅಭಿವೃದ್ಧಿಗೆ ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ…!

July 28, 2023
2:21 PM
ಕುಕ್ಕೆ ಸುಬ್ರಹ್ಮಣ್ಯದ ಬಸ್ ಸ್ಟ್ಯಾಂಡಿನ ರಸ್ತೆಯ ಅವ್ಯವಸ್ಥೆ ಹೇಳತೀರದಾಗಿದೆ. ಬಸ್ಸುಗಳ ಸರ್ಕಸ್‌, ನಡೆದಾಡಲು ಜನರ ಪರದಾಟ ಇದೆಲ್ಲಾ ನೋಡುತ್ತಾ ಇರಲು ಜನಪ್ರತಿನಿಧಿಗಳಿಗೆ ಹೇಗೆ ಮನಸ್ಸಾಗುತ್ತದೆ...?

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ಈ ದೇಶದ ಪ್ರಸಿದ್ಧ ಪುಣ್ಯ ಕ್ಷೇತ್ರ. ಈಗ  ಇಲ್ಲಿನ ಬಸ್‌ ನಿಲ್ದಾಣದ ರಸ್ತೆ ಸರಿ ಮಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಯಾತ್ರಾರ್ಥಿಗಳು ಹೇಳುವಂತಾಗಿದೆ…!. ಅಷ್ಟೊಂದು ಹದಗೆಟ್ಟಿದೆ ಈ ರಸ್ತೆ.

ಭಾರತದ ಪವಿತ್ರ ಯಾತ್ರಾಸ್ಥಳ, ನಾಗನಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದ ಬಸ್ ಸ್ಟ್ಯಾಂಡಿನ ರಸ್ತೆಯ ಅವ್ಯವಸ್ಥೆ ಈಗ ಎಲ್ಲರನ್ನೂ ನೋಡುವಂತೆ ಮಾಡಿದೆ. ಇಲ್ಲಿನ  ಬಸ್ ಸ್ಟ್ಯಾಂಡಿಗೆ  ದಿನನಿತ್ಯ ನೂರಾರು ಬಸ್ಸುಗಳು ನೃತ್ಯವನ್ನು ಮಾಡುತ್ತಾ ಬಸ್ ಸ್ಟ್ಯಾಂಡನ್ನು ತಲುಪುವಂತದ್ದು ಸರ್ವೇ ಸಾಮಾನ್ಯ. ಅದಲ್ಲದೆ ಅದೆಷ್ಟೋ ಜನ ಭಕ್ತಾದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ,ಇದೆ ಮಾರ್ಗದಲ್ಲಿ ಸಂಚರಿಸುವಂತಹ ಪರಿಸ್ಥಿತಿ ಕೂಡ ಇದೆ.

ಕುಕ್ಕೆ ಸುಬ್ರಹ್ಮಣ್ಯ ಬಸ್‌ ನಿಲ್ದಾಣದ ರಸ್ತೆ ಅವ್ಯವಸ್ಥೆ | Photo Credit – Shiva Bhat

ಈ ಹಿಂದೆ ಹಲವಾರು ಬಾರಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕೂಡ ಅವರು ಹೇಳುವ ಒಂದೇ ಉತ್ತರ “ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ನ ಲ್ಲಿ ಈ ಬಸ್ ಸ್ಟ್ಯಾಂಡಿನ ಮಾರ್ಗದ ಉನ್ನತಿಕರಿಸುವಿಕೆ ಹಾಗೂ ಸರಿಪಡಿಸುವಿಕೆ ವ್ಯವಸ್ಥೆ ಇದೆ”  ಅವರೇ ಮಾಡುತ್ತಾರೆ ಎಂದು.

ಇಲ್ಲಿಯವರೆಗೆ  ದೇವಸ್ಥಾನದ ಮಾಸ್ಟರ್‌ ಪ್ಲಾನ್‌ ಕೆಲಸವೂ ಮಾಡಿಲ್ಲ , ಕೆಎಸ್ಆರ್ಟಿಸಿ ವತಿಯಿಂದಲೂ ಆಗಿಲ್ಲ. ಈಗ  ದಿನನಿತ್ಯ ಓಡಾಡುವ ಬಸ್ಸುಗಳು, ಭಕ್ತಾದಿಗ ಳು ,ಪ್ರಯಾಣಿಕರೂ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಗೋಳು ತಪ್ಪಿದ್ದಲ್ಲ. ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ ಯಾರಾದರೂ ಸರಿ ಮಾಡಿಸಿ ಎಂದು ಹೇಳುತ್ತಿದ್ದಾರೆ ಜನರು.

ಕುಕ್ಕೆ ಸುಬ್ರಹ್ಮಣ್ಯ ಬಸ್‌ ನಿಲ್ದಾಣದ ರಸ್ತೆ ಅವ್ಯವಸ್ಥೆ | Photo Credit – Shiva Bhat
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror