#KukkeSubrahmanya | ಪ್ರಸಿದ್ಧ ಪುಣ್ಯ ಕ್ಷೇತ್ರ | ಬಸ್‌ ನಿಲ್ದಾಣದ ಅವಸ್ಥೆ…! | ರಸ್ತೆ ಅಭಿವೃದ್ಧಿಗೆ ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ…!

July 28, 2023
2:21 PM
ಕುಕ್ಕೆ ಸುಬ್ರಹ್ಮಣ್ಯದ ಬಸ್ ಸ್ಟ್ಯಾಂಡಿನ ರಸ್ತೆಯ ಅವ್ಯವಸ್ಥೆ ಹೇಳತೀರದಾಗಿದೆ. ಬಸ್ಸುಗಳ ಸರ್ಕಸ್‌, ನಡೆದಾಡಲು ಜನರ ಪರದಾಟ ಇದೆಲ್ಲಾ ನೋಡುತ್ತಾ ಇರಲು ಜನಪ್ರತಿನಿಧಿಗಳಿಗೆ ಹೇಗೆ ಮನಸ್ಸಾಗುತ್ತದೆ...?

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ಈ ದೇಶದ ಪ್ರಸಿದ್ಧ ಪುಣ್ಯ ಕ್ಷೇತ್ರ. ಈಗ  ಇಲ್ಲಿನ ಬಸ್‌ ನಿಲ್ದಾಣದ ರಸ್ತೆ ಸರಿ ಮಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಯಾತ್ರಾರ್ಥಿಗಳು ಹೇಳುವಂತಾಗಿದೆ…!. ಅಷ್ಟೊಂದು ಹದಗೆಟ್ಟಿದೆ ಈ ರಸ್ತೆ.

ಭಾರತದ ಪವಿತ್ರ ಯಾತ್ರಾಸ್ಥಳ, ನಾಗನಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದ ಬಸ್ ಸ್ಟ್ಯಾಂಡಿನ ರಸ್ತೆಯ ಅವ್ಯವಸ್ಥೆ ಈಗ ಎಲ್ಲರನ್ನೂ ನೋಡುವಂತೆ ಮಾಡಿದೆ. ಇಲ್ಲಿನ  ಬಸ್ ಸ್ಟ್ಯಾಂಡಿಗೆ  ದಿನನಿತ್ಯ ನೂರಾರು ಬಸ್ಸುಗಳು ನೃತ್ಯವನ್ನು ಮಾಡುತ್ತಾ ಬಸ್ ಸ್ಟ್ಯಾಂಡನ್ನು ತಲುಪುವಂತದ್ದು ಸರ್ವೇ ಸಾಮಾನ್ಯ. ಅದಲ್ಲದೆ ಅದೆಷ್ಟೋ ಜನ ಭಕ್ತಾದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ,ಇದೆ ಮಾರ್ಗದಲ್ಲಿ ಸಂಚರಿಸುವಂತಹ ಪರಿಸ್ಥಿತಿ ಕೂಡ ಇದೆ.

ಕುಕ್ಕೆ ಸುಬ್ರಹ್ಮಣ್ಯ ಬಸ್‌ ನಿಲ್ದಾಣದ ರಸ್ತೆ ಅವ್ಯವಸ್ಥೆ | Photo Credit – Shiva Bhat

ಈ ಹಿಂದೆ ಹಲವಾರು ಬಾರಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕೂಡ ಅವರು ಹೇಳುವ ಒಂದೇ ಉತ್ತರ “ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ನ ಲ್ಲಿ ಈ ಬಸ್ ಸ್ಟ್ಯಾಂಡಿನ ಮಾರ್ಗದ ಉನ್ನತಿಕರಿಸುವಿಕೆ ಹಾಗೂ ಸರಿಪಡಿಸುವಿಕೆ ವ್ಯವಸ್ಥೆ ಇದೆ”  ಅವರೇ ಮಾಡುತ್ತಾರೆ ಎಂದು.

ಇಲ್ಲಿಯವರೆಗೆ  ದೇವಸ್ಥಾನದ ಮಾಸ್ಟರ್‌ ಪ್ಲಾನ್‌ ಕೆಲಸವೂ ಮಾಡಿಲ್ಲ , ಕೆಎಸ್ಆರ್ಟಿಸಿ ವತಿಯಿಂದಲೂ ಆಗಿಲ್ಲ. ಈಗ  ದಿನನಿತ್ಯ ಓಡಾಡುವ ಬಸ್ಸುಗಳು, ಭಕ್ತಾದಿಗ ಳು ,ಪ್ರಯಾಣಿಕರೂ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಗೋಳು ತಪ್ಪಿದ್ದಲ್ಲ. ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ ಯಾರಾದರೂ ಸರಿ ಮಾಡಿಸಿ ಎಂದು ಹೇಳುತ್ತಿದ್ದಾರೆ ಜನರು.

ಕುಕ್ಕೆ ಸುಬ್ರಹ್ಮಣ್ಯ ಬಸ್‌ ನಿಲ್ದಾಣದ ರಸ್ತೆ ಅವ್ಯವಸ್ಥೆ | Photo Credit – Shiva Bhat
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror