ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ಈ ದೇಶದ ಪ್ರಸಿದ್ಧ ಪುಣ್ಯ ಕ್ಷೇತ್ರ. ಈಗ ಇಲ್ಲಿನ ಬಸ್ ನಿಲ್ದಾಣದ ರಸ್ತೆ ಸರಿ ಮಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಯಾತ್ರಾರ್ಥಿಗಳು ಹೇಳುವಂತಾಗಿದೆ…!. ಅಷ್ಟೊಂದು ಹದಗೆಟ್ಟಿದೆ ಈ ರಸ್ತೆ.
ಭಾರತದ ಪವಿತ್ರ ಯಾತ್ರಾಸ್ಥಳ, ನಾಗನಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದ ಬಸ್ ಸ್ಟ್ಯಾಂಡಿನ ರಸ್ತೆಯ ಅವ್ಯವಸ್ಥೆ ಈಗ ಎಲ್ಲರನ್ನೂ ನೋಡುವಂತೆ ಮಾಡಿದೆ. ಇಲ್ಲಿನ ಬಸ್ ಸ್ಟ್ಯಾಂಡಿಗೆ ದಿನನಿತ್ಯ ನೂರಾರು ಬಸ್ಸುಗಳು ನೃತ್ಯವನ್ನು ಮಾಡುತ್ತಾ ಬಸ್ ಸ್ಟ್ಯಾಂಡನ್ನು ತಲುಪುವಂತದ್ದು ಸರ್ವೇ ಸಾಮಾನ್ಯ. ಅದಲ್ಲದೆ ಅದೆಷ್ಟೋ ಜನ ಭಕ್ತಾದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ,ಇದೆ ಮಾರ್ಗದಲ್ಲಿ ಸಂಚರಿಸುವಂತಹ ಪರಿಸ್ಥಿತಿ ಕೂಡ ಇದೆ.
ಈ ಹಿಂದೆ ಹಲವಾರು ಬಾರಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕೂಡ ಅವರು ಹೇಳುವ ಒಂದೇ ಉತ್ತರ “ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ನ ಲ್ಲಿ ಈ ಬಸ್ ಸ್ಟ್ಯಾಂಡಿನ ಮಾರ್ಗದ ಉನ್ನತಿಕರಿಸುವಿಕೆ ಹಾಗೂ ಸರಿಪಡಿಸುವಿಕೆ ವ್ಯವಸ್ಥೆ ಇದೆ” ಅವರೇ ಮಾಡುತ್ತಾರೆ ಎಂದು.
ಇಲ್ಲಿಯವರೆಗೆ ದೇವಸ್ಥಾನದ ಮಾಸ್ಟರ್ ಪ್ಲಾನ್ ಕೆಲಸವೂ ಮಾಡಿಲ್ಲ , ಕೆಎಸ್ಆರ್ಟಿಸಿ ವತಿಯಿಂದಲೂ ಆಗಿಲ್ಲ. ಈಗ ದಿನನಿತ್ಯ ಓಡಾಡುವ ಬಸ್ಸುಗಳು, ಭಕ್ತಾದಿಗ ಳು ,ಪ್ರಯಾಣಿಕರೂ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಗೋಳು ತಪ್ಪಿದ್ದಲ್ಲ. ಯಾವುದಾದರೂ “ಮಾಸ್ಟರ್ ಪ್ಲಾನ್” ಮಾಡಿ ಯಾರಾದರೂ ಸರಿ ಮಾಡಿಸಿ ಎಂದು ಹೇಳುತ್ತಿದ್ದಾರೆ ಜನರು.
ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…
ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…