ಸುದ್ದಿಗಳು

#KukkeSubrahmanya | ಪ್ರಸಿದ್ಧ ಪುಣ್ಯ ಕ್ಷೇತ್ರ | ಬಸ್‌ ನಿಲ್ದಾಣದ ಅವಸ್ಥೆ…! | ರಸ್ತೆ ಅಭಿವೃದ್ಧಿಗೆ ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ಈ ದೇಶದ ಪ್ರಸಿದ್ಧ ಪುಣ್ಯ ಕ್ಷೇತ್ರ. ಈಗ  ಇಲ್ಲಿನ ಬಸ್‌ ನಿಲ್ದಾಣದ ರಸ್ತೆ ಸರಿ ಮಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಯಾತ್ರಾರ್ಥಿಗಳು ಹೇಳುವಂತಾಗಿದೆ…!. ಅಷ್ಟೊಂದು ಹದಗೆಟ್ಟಿದೆ ಈ ರಸ್ತೆ.

Advertisement

ಭಾರತದ ಪವಿತ್ರ ಯಾತ್ರಾಸ್ಥಳ, ನಾಗನಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದ ಬಸ್ ಸ್ಟ್ಯಾಂಡಿನ ರಸ್ತೆಯ ಅವ್ಯವಸ್ಥೆ ಈಗ ಎಲ್ಲರನ್ನೂ ನೋಡುವಂತೆ ಮಾಡಿದೆ. ಇಲ್ಲಿನ  ಬಸ್ ಸ್ಟ್ಯಾಂಡಿಗೆ  ದಿನನಿತ್ಯ ನೂರಾರು ಬಸ್ಸುಗಳು ನೃತ್ಯವನ್ನು ಮಾಡುತ್ತಾ ಬಸ್ ಸ್ಟ್ಯಾಂಡನ್ನು ತಲುಪುವಂತದ್ದು ಸರ್ವೇ ಸಾಮಾನ್ಯ. ಅದಲ್ಲದೆ ಅದೆಷ್ಟೋ ಜನ ಭಕ್ತಾದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ,ಇದೆ ಮಾರ್ಗದಲ್ಲಿ ಸಂಚರಿಸುವಂತಹ ಪರಿಸ್ಥಿತಿ ಕೂಡ ಇದೆ.

ಕುಕ್ಕೆ ಸುಬ್ರಹ್ಮಣ್ಯ ಬಸ್‌ ನಿಲ್ದಾಣದ ರಸ್ತೆ ಅವ್ಯವಸ್ಥೆ | Photo Credit – Shiva Bhat

ಈ ಹಿಂದೆ ಹಲವಾರು ಬಾರಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕೂಡ ಅವರು ಹೇಳುವ ಒಂದೇ ಉತ್ತರ “ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ನ ಲ್ಲಿ ಈ ಬಸ್ ಸ್ಟ್ಯಾಂಡಿನ ಮಾರ್ಗದ ಉನ್ನತಿಕರಿಸುವಿಕೆ ಹಾಗೂ ಸರಿಪಡಿಸುವಿಕೆ ವ್ಯವಸ್ಥೆ ಇದೆ”  ಅವರೇ ಮಾಡುತ್ತಾರೆ ಎಂದು.

ಇಲ್ಲಿಯವರೆಗೆ  ದೇವಸ್ಥಾನದ ಮಾಸ್ಟರ್‌ ಪ್ಲಾನ್‌ ಕೆಲಸವೂ ಮಾಡಿಲ್ಲ , ಕೆಎಸ್ಆರ್ಟಿಸಿ ವತಿಯಿಂದಲೂ ಆಗಿಲ್ಲ. ಈಗ  ದಿನನಿತ್ಯ ಓಡಾಡುವ ಬಸ್ಸುಗಳು, ಭಕ್ತಾದಿಗ ಳು ,ಪ್ರಯಾಣಿಕರೂ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಗೋಳು ತಪ್ಪಿದ್ದಲ್ಲ. ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ ಯಾರಾದರೂ ಸರಿ ಮಾಡಿಸಿ ಎಂದು ಹೇಳುತ್ತಿದ್ದಾರೆ ಜನರು.

ಕುಕ್ಕೆ ಸುಬ್ರಹ್ಮಣ್ಯ ಬಸ್‌ ನಿಲ್ದಾಣದ ರಸ್ತೆ ಅವ್ಯವಸ್ಥೆ | Photo Credit – Shiva Bhat
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…

12 hours ago

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ…

12 hours ago

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…

13 hours ago

82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ

ಸಕಲಜೀವಿಗಳ ಆಡುಂಬೊಲ ನಮ್ಮೀ  ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…

13 hours ago

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

21 hours ago