Advertisement
ಸುದ್ದಿಗಳು

#KukkeSubrahmanya | ಪ್ರಸಿದ್ಧ ಪುಣ್ಯ ಕ್ಷೇತ್ರ | ಬಸ್‌ ನಿಲ್ದಾಣದ ಅವಸ್ಥೆ…! | ರಸ್ತೆ ಅಭಿವೃದ್ಧಿಗೆ ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ…!

Share

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ಈ ದೇಶದ ಪ್ರಸಿದ್ಧ ಪುಣ್ಯ ಕ್ಷೇತ್ರ. ಈಗ  ಇಲ್ಲಿನ ಬಸ್‌ ನಿಲ್ದಾಣದ ರಸ್ತೆ ಸರಿ ಮಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಯಾತ್ರಾರ್ಥಿಗಳು ಹೇಳುವಂತಾಗಿದೆ…!. ಅಷ್ಟೊಂದು ಹದಗೆಟ್ಟಿದೆ ಈ ರಸ್ತೆ.

Advertisement

ಭಾರತದ ಪವಿತ್ರ ಯಾತ್ರಾಸ್ಥಳ, ನಾಗನಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದ ಬಸ್ ಸ್ಟ್ಯಾಂಡಿನ ರಸ್ತೆಯ ಅವ್ಯವಸ್ಥೆ ಈಗ ಎಲ್ಲರನ್ನೂ ನೋಡುವಂತೆ ಮಾಡಿದೆ. ಇಲ್ಲಿನ  ಬಸ್ ಸ್ಟ್ಯಾಂಡಿಗೆ  ದಿನನಿತ್ಯ ನೂರಾರು ಬಸ್ಸುಗಳು ನೃತ್ಯವನ್ನು ಮಾಡುತ್ತಾ ಬಸ್ ಸ್ಟ್ಯಾಂಡನ್ನು ತಲುಪುವಂತದ್ದು ಸರ್ವೇ ಸಾಮಾನ್ಯ. ಅದಲ್ಲದೆ ಅದೆಷ್ಟೋ ಜನ ಭಕ್ತಾದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ,ಇದೆ ಮಾರ್ಗದಲ್ಲಿ ಸಂಚರಿಸುವಂತಹ ಪರಿಸ್ಥಿತಿ ಕೂಡ ಇದೆ.

ಕುಕ್ಕೆ ಸುಬ್ರಹ್ಮಣ್ಯ ಬಸ್‌ ನಿಲ್ದಾಣದ ರಸ್ತೆ ಅವ್ಯವಸ್ಥೆ | Photo Credit – Shiva Bhat

ಈ ಹಿಂದೆ ಹಲವಾರು ಬಾರಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕೂಡ ಅವರು ಹೇಳುವ ಒಂದೇ ಉತ್ತರ “ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ನ ಲ್ಲಿ ಈ ಬಸ್ ಸ್ಟ್ಯಾಂಡಿನ ಮಾರ್ಗದ ಉನ್ನತಿಕರಿಸುವಿಕೆ ಹಾಗೂ ಸರಿಪಡಿಸುವಿಕೆ ವ್ಯವಸ್ಥೆ ಇದೆ”  ಅವರೇ ಮಾಡುತ್ತಾರೆ ಎಂದು.

ಇಲ್ಲಿಯವರೆಗೆ  ದೇವಸ್ಥಾನದ ಮಾಸ್ಟರ್‌ ಪ್ಲಾನ್‌ ಕೆಲಸವೂ ಮಾಡಿಲ್ಲ , ಕೆಎಸ್ಆರ್ಟಿಸಿ ವತಿಯಿಂದಲೂ ಆಗಿಲ್ಲ. ಈಗ  ದಿನನಿತ್ಯ ಓಡಾಡುವ ಬಸ್ಸುಗಳು, ಭಕ್ತಾದಿಗ ಳು ,ಪ್ರಯಾಣಿಕರೂ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಗೋಳು ತಪ್ಪಿದ್ದಲ್ಲ. ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ ಯಾರಾದರೂ ಸರಿ ಮಾಡಿಸಿ ಎಂದು ಹೇಳುತ್ತಿದ್ದಾರೆ ಜನರು.

ಕುಕ್ಕೆ ಸುಬ್ರಹ್ಮಣ್ಯ ಬಸ್‌ ನಿಲ್ದಾಣದ ರಸ್ತೆ ಅವ್ಯವಸ್ಥೆ | Photo Credit – Shiva Bhat
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

7 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

21 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

22 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

22 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

22 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

22 hours ago