Advertisement
ಸುದ್ದಿಗಳು

#KukkeSubrahmanya | ಪ್ರಸಿದ್ಧ ಪುಣ್ಯ ಕ್ಷೇತ್ರ | ಬಸ್‌ ನಿಲ್ದಾಣದ ಅವಸ್ಥೆ…! | ರಸ್ತೆ ಅಭಿವೃದ್ಧಿಗೆ ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ…!

Share

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ಈ ದೇಶದ ಪ್ರಸಿದ್ಧ ಪುಣ್ಯ ಕ್ಷೇತ್ರ. ಈಗ  ಇಲ್ಲಿನ ಬಸ್‌ ನಿಲ್ದಾಣದ ರಸ್ತೆ ಸರಿ ಮಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಯಾತ್ರಾರ್ಥಿಗಳು ಹೇಳುವಂತಾಗಿದೆ…!. ಅಷ್ಟೊಂದು ಹದಗೆಟ್ಟಿದೆ ಈ ರಸ್ತೆ.

ಭಾರತದ ಪವಿತ್ರ ಯಾತ್ರಾಸ್ಥಳ, ನಾಗನಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದ ಬಸ್ ಸ್ಟ್ಯಾಂಡಿನ ರಸ್ತೆಯ ಅವ್ಯವಸ್ಥೆ ಈಗ ಎಲ್ಲರನ್ನೂ ನೋಡುವಂತೆ ಮಾಡಿದೆ. ಇಲ್ಲಿನ  ಬಸ್ ಸ್ಟ್ಯಾಂಡಿಗೆ  ದಿನನಿತ್ಯ ನೂರಾರು ಬಸ್ಸುಗಳು ನೃತ್ಯವನ್ನು ಮಾಡುತ್ತಾ ಬಸ್ ಸ್ಟ್ಯಾಂಡನ್ನು ತಲುಪುವಂತದ್ದು ಸರ್ವೇ ಸಾಮಾನ್ಯ. ಅದಲ್ಲದೆ ಅದೆಷ್ಟೋ ಜನ ಭಕ್ತಾದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ,ಇದೆ ಮಾರ್ಗದಲ್ಲಿ ಸಂಚರಿಸುವಂತಹ ಪರಿಸ್ಥಿತಿ ಕೂಡ ಇದೆ.

ಕುಕ್ಕೆ ಸುಬ್ರಹ್ಮಣ್ಯ ಬಸ್‌ ನಿಲ್ದಾಣದ ರಸ್ತೆ ಅವ್ಯವಸ್ಥೆ | Photo Credit – Shiva Bhat

ಈ ಹಿಂದೆ ಹಲವಾರು ಬಾರಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕೂಡ ಅವರು ಹೇಳುವ ಒಂದೇ ಉತ್ತರ “ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ನ ಲ್ಲಿ ಈ ಬಸ್ ಸ್ಟ್ಯಾಂಡಿನ ಮಾರ್ಗದ ಉನ್ನತಿಕರಿಸುವಿಕೆ ಹಾಗೂ ಸರಿಪಡಿಸುವಿಕೆ ವ್ಯವಸ್ಥೆ ಇದೆ”  ಅವರೇ ಮಾಡುತ್ತಾರೆ ಎಂದು.

ಇಲ್ಲಿಯವರೆಗೆ  ದೇವಸ್ಥಾನದ ಮಾಸ್ಟರ್‌ ಪ್ಲಾನ್‌ ಕೆಲಸವೂ ಮಾಡಿಲ್ಲ , ಕೆಎಸ್ಆರ್ಟಿಸಿ ವತಿಯಿಂದಲೂ ಆಗಿಲ್ಲ. ಈಗ  ದಿನನಿತ್ಯ ಓಡಾಡುವ ಬಸ್ಸುಗಳು, ಭಕ್ತಾದಿಗ ಳು ,ಪ್ರಯಾಣಿಕರೂ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಗೋಳು ತಪ್ಪಿದ್ದಲ್ಲ. ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ ಯಾರಾದರೂ ಸರಿ ಮಾಡಿಸಿ ಎಂದು ಹೇಳುತ್ತಿದ್ದಾರೆ ಜನರು.

ಕುಕ್ಕೆ ಸುಬ್ರಹ್ಮಣ್ಯ ಬಸ್‌ ನಿಲ್ದಾಣದ ರಸ್ತೆ ಅವ್ಯವಸ್ಥೆ | Photo Credit – Shiva Bhat
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago