Advertisement
ಸುದ್ದಿಗಳು

#KukkeSubrahmanya | ಪ್ರಸಿದ್ಧ ಪುಣ್ಯ ಕ್ಷೇತ್ರ | ಬಸ್‌ ನಿಲ್ದಾಣದ ಅವಸ್ಥೆ…! | ರಸ್ತೆ ಅಭಿವೃದ್ಧಿಗೆ ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ…!

Share

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ಈ ದೇಶದ ಪ್ರಸಿದ್ಧ ಪುಣ್ಯ ಕ್ಷೇತ್ರ. ಈಗ  ಇಲ್ಲಿನ ಬಸ್‌ ನಿಲ್ದಾಣದ ರಸ್ತೆ ಸರಿ ಮಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಯಾತ್ರಾರ್ಥಿಗಳು ಹೇಳುವಂತಾಗಿದೆ…!. ಅಷ್ಟೊಂದು ಹದಗೆಟ್ಟಿದೆ ಈ ರಸ್ತೆ.

ಭಾರತದ ಪವಿತ್ರ ಯಾತ್ರಾಸ್ಥಳ, ನಾಗನಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದ ಬಸ್ ಸ್ಟ್ಯಾಂಡಿನ ರಸ್ತೆಯ ಅವ್ಯವಸ್ಥೆ ಈಗ ಎಲ್ಲರನ್ನೂ ನೋಡುವಂತೆ ಮಾಡಿದೆ. ಇಲ್ಲಿನ  ಬಸ್ ಸ್ಟ್ಯಾಂಡಿಗೆ  ದಿನನಿತ್ಯ ನೂರಾರು ಬಸ್ಸುಗಳು ನೃತ್ಯವನ್ನು ಮಾಡುತ್ತಾ ಬಸ್ ಸ್ಟ್ಯಾಂಡನ್ನು ತಲುಪುವಂತದ್ದು ಸರ್ವೇ ಸಾಮಾನ್ಯ. ಅದಲ್ಲದೆ ಅದೆಷ್ಟೋ ಜನ ಭಕ್ತಾದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ,ಇದೆ ಮಾರ್ಗದಲ್ಲಿ ಸಂಚರಿಸುವಂತಹ ಪರಿಸ್ಥಿತಿ ಕೂಡ ಇದೆ.

ಕುಕ್ಕೆ ಸುಬ್ರಹ್ಮಣ್ಯ ಬಸ್‌ ನಿಲ್ದಾಣದ ರಸ್ತೆ ಅವ್ಯವಸ್ಥೆ | Photo Credit – Shiva Bhat

ಈ ಹಿಂದೆ ಹಲವಾರು ಬಾರಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕೂಡ ಅವರು ಹೇಳುವ ಒಂದೇ ಉತ್ತರ “ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ನ ಲ್ಲಿ ಈ ಬಸ್ ಸ್ಟ್ಯಾಂಡಿನ ಮಾರ್ಗದ ಉನ್ನತಿಕರಿಸುವಿಕೆ ಹಾಗೂ ಸರಿಪಡಿಸುವಿಕೆ ವ್ಯವಸ್ಥೆ ಇದೆ”  ಅವರೇ ಮಾಡುತ್ತಾರೆ ಎಂದು.

ಇಲ್ಲಿಯವರೆಗೆ  ದೇವಸ್ಥಾನದ ಮಾಸ್ಟರ್‌ ಪ್ಲಾನ್‌ ಕೆಲಸವೂ ಮಾಡಿಲ್ಲ , ಕೆಎಸ್ಆರ್ಟಿಸಿ ವತಿಯಿಂದಲೂ ಆಗಿಲ್ಲ. ಈಗ  ದಿನನಿತ್ಯ ಓಡಾಡುವ ಬಸ್ಸುಗಳು, ಭಕ್ತಾದಿಗ ಳು ,ಪ್ರಯಾಣಿಕರೂ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಗೋಳು ತಪ್ಪಿದ್ದಲ್ಲ. ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ ಯಾರಾದರೂ ಸರಿ ಮಾಡಿಸಿ ಎಂದು ಹೇಳುತ್ತಿದ್ದಾರೆ ಜನರು.

ಕುಕ್ಕೆ ಸುಬ್ರಹ್ಮಣ್ಯ ಬಸ್‌ ನಿಲ್ದಾಣದ ರಸ್ತೆ ಅವ್ಯವಸ್ಥೆ | Photo Credit – Shiva Bhat
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

26 minutes ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

9 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

13 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

1 day ago