Advertisement
MIRROR FOCUS

ಕುಕ್ಕೆ ಸುಬ್ರಹ್ಮಣ್ಯ | ನದಿಗೆ ಪ್ಲಾಸ್ಟಿಕ್‌ ಎಸೆಯಬೇಡಿ…| ದಂಡ ಕಟ್ಟಲು ಸಿದ್ಧರಾಗಿ…! | ತ್ಯಾಜ್ಯ ಎಸೆದ ವ್ಯಕ್ತಿಗೆ ದಂಡ ವಿಧಿಸಿದ ಪಂಚಾಯತ್‌ |

Share

ಕುಕ್ಕೆ ಸುಬ್ರಹ್ಮಣ್ಯ ಪವಿತ್ರ ನಾಗಕ್ಷೇತ್ರ. ನಾಡಿನ ವಿವಿದೆಡೆಯಿಂದ ಭಕ್ತಾದಿಗಳು ಆಗಮಿಸುತ್ತಾರೆ. ನದಿ ಸೇರಿದಂತೆ ಆಸುಪಾಸಿನಲ್ಲಿ ಪ್ಲಾಸ್ಟಿಕ್‌ ಸೇರಿದಂತೆ ಮಲಿನ ಹೆಚ್ಚಾಗುತ್ತಿದೆ. ಪ್ಲಾಸ್ಟಿಕ್‌ ಎಸೆಯದಂತೆ, ಮಲಿನ ಮಾಡದಂತೆ ಜಾಗೃತಿ ಮಾಡುತ್ತಿದ್ದರೂ ಭಕ್ತಾದಿಗಳಿಗೆ ಅರ್ಥವೇ ಆಗುತ್ತಿಲ್ಲ. ಈಚೆಗಷ್ಟೇ ಲೋಡು ಗಟ್ಟಲೆ ಪ್ಲಾಸ್ಟಿಕ್‌ ಸಂಗ್ರಹ ಮಾಡಲಾಗಿತ್ತು. ಹಾಗಿದ್ದರೂ ಮತ್ತೆ ಪ್ಲಾಸ್ಟಿಕ್‌ ಎಸೆಯುವುದರ ವಿರುದ್ಧ ಕ್ರಮವಾಗಬೇಕಿದೆ. ಇದೀಗ ದಂಡ ವಿಧಿಸುವ ಮೂಲಕ ತ್ಯಾಜ್ಯ ಎಸೆಯುವದನ್ನು ತಡೆಯಲು ಸುಬ್ರಹ್ಮಣ್ಯ ಗ್ರಾಪಂ ಮುಂದಾಗಿದೆ. 

Advertisement
Advertisement

ಕುಕ್ಕೆ ಸುಬ್ರಹ್ಮಣ್ಯದ ಸವಾರಿ ಮಂಟಪ ಬಳಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಪ್ಲಾಸ್ಟಿಕ್ ಹಾಗೂ ಇನ್ನಿತರ ತ್ಯಾಜ್ಯಗಳನ್ನು ದರ್ಪಣ ತೀರ್ಥ ನದಿಗೆ ಎಸೆಯುತ್ತಿರುವುದನ್ನು ಪತ್ತೆ ಮಾಡಿದ ಪಂಚಾಯತ್‌ ಸಿಬಂದಿಗಳು ಒಂದು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.ಮುಂದಿನ ದಿನಗಳಲ್ಲಿ ಈ ರೀತಿಯಾಗಿ ನದಿಗೆ, ರಸ್ತೆಯಲ್ಲಿ, ಹಾಗೂ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಸೇರಿದಂತೆ ಎಲ್ಲಾ ರೀತಿಯ ತ್ಯಾಜ್ಯ ಗಳನ್ನು ಎಸೆಯುವುದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪಂಚಾಯತ್‌ ಅಧಿಕಾರಿಗಳು ಎಚ್ಚರಿಸಿದ್ದಾರೆ.

Advertisement

ಹಲವು ಸಮಯಗಳ ಹಿಂದೆಯೇ ಇಂತಹದ್ದೊಂದು ಕ್ರಮವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಕೈಗೊಳ್ಳಬೇಕಾಗಿತ್ತು. ಈಗಲಾದರೂ ದಂಡದ ಮೂಲಕ ಎಚ್ಚರಿಕೆಯನ್ನು ನೀಡುತ್ತಿದೆ. ರಾಜ್ಯದ ವಿವಿದೆಡೆಯಿಂದ ಸಾಕಷ್ಟು ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಹೀಗಾಗಿ ರಾಜ್ಯಮಟ್ಟದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯ ಇದೆ.  ಸುಬ್ರಹ್ಮಣ್ಯದ ಸ್ವಚ್ಛತೆ ಅತೀ ಅಗತ್ಯವಾಗಿದೆ, ನದಿ ಹಾಗೂ ಸುಬ್ರಹ್ಮಣ್ಯದ ಆಸುಪಾಸುಗಳಲ್ಲಿ  ಮಲಿನವಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಪ್ರತೀ ನಾಗರಿಕರ ಜವಾಬ್ದಾರಿ ಇದಾಗಿದೆ. ಸ್ವಚ್ಛತೆಯ ಬಗ್ಗೆ ಸುಬ್ರಹ್ಮಣ್ಯದ ಪ್ರತೀ ವಸತಿಗೃಹದಲ್ಲಿ ಅರಿವು ಮೂಡಿಸುವ ಫಲಕಗಳ ಅಳವಡಿಕೆ ಹಾಗೂ ತ್ಯಾಜ್ಯ, ಪ್ಲಾಸ್ಟಿಕ್‌ ಎಸೆದರೆ, ನದಿ ಮಲಿನ ಮಾಡಿದರೆ ದಂಡ ವಿಧಿಸುವ ಬಗ್ಗೆ ತಿಳುವಳಿಕೆ ನೀಡುವ ಮೂಲಕ ಸ್ವಚ್ಛತೆಯ ಹೆಜ್ಜೆ ಇಡಬೇಕಾಗಿದೆ.

Advertisement
Advertisement

Kukke Subrahmanya, renowned as a famous Nagakshetra, attracts devotees from all over the country who come to seek blessings. Unfortunately, the influx of visitors has led to an increase in pollution, including plastic waste, in the surrounding areas and the river. Despite ongoing awareness campaigns urging devotees to refrain from littering and to avoid plastic pollution, many visitors continue to disregard these guidelines. A significant amount of plastic waste was recently collected, underscoring the severity of the issue. In response, the Subrahmanya Gramam Panchayath has taken the commendable step of imposing fines to curb waste dumping and protect the sacred site’s environment.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ಎಸೆದರೂ “ದಂಡ” | ರಥಬೀದಿಯಲ್ಲಿ ಮಲಗಿದರೂ “ದಂಡ” |

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜುಲೈ 1…. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ… : ಇಂದು ವಿಶೇಷ ವೃತ್ತಿಗಳ ದಿನ

ವೈದ್ಯರ ದಿನ(Doctors day) - ಪತ್ರಕರ್ತರ ದಿನ(Journalist Day) - ಲೆಕ್ಕಪರಿಶೋಧಕರ ದಿನ(Auditor's…

11 hours ago

ಗಾಯವಾದ ಕೆಚ್ಚಲಿನಿಂದ ತೊಟ್ಟಿಕ್ಕುತ್ತಿರುವ ನೀರು : ಹೋಮಿಯೊಪತಿ ಚಿಕಿತ್ಸೆ

ಕೊಟ್ಟಿಗೆಯಲ್ಲಿ(Cow Shed) ಏನೇ ಸಮಸ್ಯೆ ಬಂದರೂ ನನ್ನನ್ನೇ ಸಂಪರ್ಕಿಸುತ್ತಿದ್ದ ಕೃಷಿಕ ಮಿತ್ರರೊಬ್ಬರು ಒಂದಿನ…

11 hours ago

ಎರೆಹುಳಗೊಬ್ಬರ ಕುರಿತ ಮಾಹಿತಿ : ಎರೆಹುಳ ಗೊಬ್ಬರವನ್ನು ಖರೀದಿಸುವಾಗ ಎಚ್ಚರ

ಎರೆಹುಳ(Earthworm) ಕೃಷಿ ಎರೆಗೊಬ್ಬರದ ಉತ್ಪನ್ನ(agricultural fertilizer product) ಅಥವಾ ಒಂದು ಪ್ರಕ್ರಿಯೆಯಲ್ಲಿ ಹುಳುಗಳನ್ನು…

12 hours ago

ಆಹಾರ ಕಲಬೆರಕೆ : ಹೊರಗೆ ತಿನ್ನುವ ಮುಂಚೆ ಈ ಎಲ್ಲಾ ಅಂಶಗಳನ್ನು ಖಚಿತಪಡಿಸಿಕೊಳ್ಳಿ

ನಿನ್ನೆ ಪತ್ನಿ ಅಂಗಡಿಯಿಂದ(Shop) ಗಿಣ್ಣು ತರಿಸಿದ್ದಳು.. ರಾತ್ರಿ ಟಿವಿ ನೋಡುತ್ತಿದ್ದಾಗ ಅದನ್ನು ಕುಯ್ದು…

13 hours ago

ದೇಶದಾದ್ಯಂತ ಕಾಳುಮೆಣಸಿಗೆ ಬಂಗಾರದ ಬೆಲೆ : ಕ್ವಿಂಟಾಲ್‌ಗೆ 88,000 ರೂಪಾಯಿ ಭರ್ಜರಿ ದರ

ವರ್ಷವಿಡೀ ತಾವು ಬೆಳೆದ ಬೆಲೆ(Rate) ಕೈಗೆ ಬರಲು ರೈತರು(Farmer) ಇನ್ನಿಲ್ಲದ ಕಷ್ಟ ಪಡುತ್ತಾರೆ.…

13 hours ago